ಹೊಸದಿಲ್ಲಿ: ಸುಧರ್ಮಾ ಪತ್ರಿಕೆಯ ಸಂಪಾದಕ ಸಂಪತ್ ಕುಮಾರ್ ಅವರ ನಿಧನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸ್ಕೃತದಲ್ಲೇ ಶೋಕ ಸಂದೇಶ ಕಳಿಸಿದ್ದಾರೆ.
ಶ್ರೀಮತಿ ಜಯಲಕ್ಷ್ಮಿ ಮಹೋದಯೇ ಎಂದು ತಮ್ಮ ಪತ್ರ ಆರಂಭಿಸಿರುವ ಪ್ರಧಾನಿ ಅವರು, ʻಏತಸ್ಮಿನ್ ಕಠಿನಸಮಯೇ ಮಮ ಸಂವೇದನಾಃ ಕುಟುಂಬೇನ ಸಹ ಸಂತಿ (ಈ ಕಠಿಣ ಸಮಯದಲ್ಲಿ ಕುಟುಂಬದವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ) ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಸರಳ ಸ್ನೇಹಶೀಲ ವ್ಯಕ್ತಿತ್ವದ ಸಂಪತ್ಕುಮಾರ್ ಸಂಸ್ಕೃತ ಭಾಷೆಯ ಪ್ರಚಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಸಂಸ್ಕೃತವು ಎಲ್ಲರಿಗೂ ತಲುಪುವಂತಾಗಬೇಕೆಂಬ ಉದ್ದೇಶದಿಂದ ಅವರು ಪಟ್ಟ ಪರಿಶ್ರಮ ಎಲ್ಲರಿಗೂ ಪ್ರೇರಣಾದಾಯಕವಾಗಬೇಕು ಎಂದು ಮೋದಿ ಹೇಳಿದ್ದಾರೆ.
ಕೆ.ವಿ.ಸಂಪತ್ಕುಮಾರ್ ಅವರ ನಿಧನದ ವಿಷಯ ತಿಳಿದು ನೋವಾಯಿತು. ಸರಳ, ಸ್ನೇಹಶೀಲ ವ್ಯಕ್ತಿತ್ವದ ಶ್ರೀಮಂತ ಹೃದಯ ಅವರದು ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.