ನವದೆಹಲಿ: ದೇಶದಲ್ಲಿ ಅಬಕಾರಿ ಸುಂಕ ಕಡಿತ ಮತ್ತು ಅನೇಕ ರಾಜ್ಯಗಳಲ್ಲಿ ವ್ಯಾಟ್ ಕಡಿತದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ. ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರ ಗಣನೀಯವಾಗಿ ಇಳಿಕೆ ಕಂಡಿದೆ.
ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ, ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಅಡುಗೆ ಎಣ್ಣೆ ದರ ಪ್ರತಿ ಕೆಜಿಗೆ 20 ರೂ.ವರೆಗೂ ದರ ಕಡಿಮೆಯಾಗಿದೆ. ಖಾದ್ಯ ತೈಲ ಬೆಲೆಗಳು ಸಾಕಷ್ಟು ಗಣನೀಯವಾಗಿ ಕುಸಿದಿವೆ. ಹಲವು ಸ್ಥಳಗಳಲ್ಲಿ 20 ರೂ., 18 ರೂ., 10 ರೂ., 7 ರೂ.ಗಳಷ್ಟು ಇಳಿಕೆಯಾಗಿದೆ. ತಾಳೆ ಎಣ್ಣೆ, ಕಡಲೆಕಾಯಿ, ಸೋಯಾಬೀನ್, ಸೂರ್ಯಕಾಂತಿ ಮತ್ತು ಎಲ್ಲಾ ಪ್ರಮುಖ ಎಣ್ಣೆಗಳ ಬೆಲೆ ಕುಸಿತ ಕಂಡಿದೆ ಎಂದು ಹೇಳಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…