Categories: ದೇಶ

ಅಮೇರಿಕಾದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೋನ ವೈರಸ್‌ ಸೋಂಕು

ವಾಷಿಂಗ್ಟನ್ ; ಕೋವಿಡ್‌ ನಿಂದಾಗಿ ಅಮೇರಿಕದಲ್ಲಿ ಜನರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಸಾಲದೆ ಫುಟ್​ಬಾಲ್ ಅಂಗಳವನ್ನೇ ಆಸ್ಪತ್ರೆಯನ್ನಾಗಿ ಬದಲಾಯಿಸಲಾಗಿತ್ತು. ಇಡೀ ವಿಶ್ವದಲ್ಲೇ ಅತಿಹೆಚ್ಚು ಸಾವು ಪ್ರಕರಣಗಳು ಅಮೆರಿಕದಲ್ಲಿ ದಾಖಲಾಗಿತ್ತು. ಪರಿಣಾಮ ಅಲ್ಲಿನ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರುವ ಮೂಲಕ ಸೋಂಕನ್ನು ಒಂದು ಹಂತಕ್ಕೆ ನಿಯಂತ್ರಿಸಿದ್ದರು. ಆದರೆ, ಇದೀಗ ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯ ಪ್ರಾಬಲ್ಯ ಹೆಚ್ಚಾಗುತ್ತಿದ್ದು, ಕೊರೊನಾ ಪ್ರಕರಣಗಳು ವೇಗವಾಗಿ ಏರುತ್ತಿವೆ ಎಂದು ಅಂಕಿಅಂಶಗಳು ಖಚಿತ ಪಡಿಸಿದೆ. ಅಲ್ಲದೆ, ಕ್ಸಿನೇಷನ್ ಪ್ರಕ್ರಿಯೆಗಳು ಕೂಡ ಅಮೆರಿಕಾದಲ್ಲಿ ಸ್ಥಗಿತಗೊಂಡಿರುವುದು ಕೊರೋನಾ ಪ್ರಕರಣಗಳ ಏರಿಕೆಗೆ ಕಾರಣವಾಗಿರಬಹುದು ಎಂದು ವರದಿಯಾಗಿದೆ.
ಕಳೆದ ಏಳು ದಿನಗಳ ಸರಾಸರಿ ತೆಗೆದುಕೊಂಡರೇ, ಹೊಸ ಪ್ರಕರಣಗಳ ಏರಿಕೆ ಜುಲೈ 6 ರ ವೇಳೆಗೆ 13,859 ಆಗಿದ್ದು, ಎರಡು ವಾರಗಳ ಹಿಂದಿನ ಪ್ರಕರಣಗಳಿಗೆ ಹೋಲಿಸಿದರೆ 21 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು (CDC) ತಿಳಿಸಿವೆ. ಈ ಪ್ರಕರಣಗಳಲ್ಲಿ ಜುಲೈ 4 ರ ವಾರಾಂತ್ಯದ ರಜಾದಿನಗಳನ್ನು ಸೇರಿಸಿಲ್ಲ. ಅದನ್ನು ಸೇರಿಸಿದರೇ, ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು. ಡೆಲ್ಟಾ ರೂಪಾಂತರಿ ಪ್ರಕರಣಗಳು ಹೆಚ್ಚಾಗಿದ್ದು, ಇದರಿಂದಾಗಿಯೇ ಸುಮಾರು 52 ಪ್ರತಿಶತದಷ್ಟು ಪ್ರಕರಣಗಳು ಹೆಚ್ಚಾಗಿವೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ತಿಳಿಸಿವೆ. ವಿಶ್ವದ ಎಲ್ಲಾ ದೇಶಗಳಿಗಿಂತ ಹೆಚ್ಚಿನ ಲಸಿಕೆಗಳ ಲಭ್ಯತೆ ಇದ್ದರೂ ಕೂಡ ಅಮೆರಿಕ, ಲಸಿಕಾ ಅಭಿಯಾನವನ್ನು ಏಪ್ರಿಲ್‌ನಿಂದಲೇ ಸ್ಥಗಿತಗೊಳಿಸಿತ್ತು. ಶೇಕಡಾ 70 ರಷ್ಟು ವಯಸ್ಕರಿಗೆ ಭಾಗಶಃ ಲಸಿಕೆ ಹಾಕುವ ಗುರಿಯನ್ನು ಕೂಡ ಅಮೆರಿಕಾದಲ್ಲಿ ತಲುಪಲಾಗಿಲ್ಲ. ಇಲ್ಲಿಯವರೆಗೆ ಶೇಕಡಾ 67 ರಷ್ಟು ವಯಸ್ಕರಿಗೆ ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದು, ಮಿಸೌರಿಯ ಸ್ಪ್ರಿಂಗ್‌ಫೀಲ್ಡ್‌ ಆಸ್ಪತ್ರೆಯಲ್ಲಿ ಈ ವಾರಾಂತ್ಯದಲ್ಲಿ ಆಸ್ಪತ್ರೆಗೆ ದಾಖಲಾದ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. “ಅಮೆರಿಕಾದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಎರಡು ವಿಭಿನ್ನ ಸ್ವರೂಪಗಳಿವೆ. ಇದರಲ್ಲಿ ಒಂದು ಹೆಚ್ಚು ಲಸಿಕೆ ಪಡೆಯದ ಜನರಿರುವ ಸ್ಥಳಗಳಲ್ಲಿ ವೈರಸ್ ಹೆಚ್ಚಾಗಿದೆ. ಇನ್ನೊಂದು, ದೇಶದ ಇತರ ಭಾಗಗಳಲ್ಲಿ ಉಸಿರಾಟದ ಸಮಸ್ಯೆಯಾಗಿ ಮಾರ್ಪಟ್ಟಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಕೇಂದ್ರದ ಅಮೆಶ್ ಅಡಾಲ್ಜಾ ತಿಳಿಸಿದ್ದಾರೆ. ದೇಶದಲ್ಲಿಯೂ ಡೆಲ್ಟಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಮತ್ತು ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಎನ್ನಲು, ಡೆಲ್ಟಾ ಪ್ಲಸ್ ವೈರಸ್‌ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

Indresh KC

Recent Posts

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

7 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

9 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

24 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

26 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

51 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

1 hour ago