ಅಯೋಧ್ಯೆಯಲ್ಲಿನ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವದ ಏಳು ಖಂಡಗಳ 115 ದೇಶಗಳ ನೀರನ್ನು ಬಳಸಲಾಗುತ್ತಿದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಪ್ರಕಟಿಸಿದ್ದಾರೆ.
ವಸುದೈವ ಕುಟುಂಬಕಂ’ ಪರಿಕಲ್ಪನೆಯಲ್ಲಿ ಈ ಮಹತ್ ಕಾರ್ಯ ನಡೆಯುತ್ತಿದೆ. ಈಗಾಗಲೇ ಕೆಲವು ದೇಶಗಳಿಂದ ನೀರು ಬಂದು ತಲುಪಿದ್ದು, ಅಲ್ಲಿನ ರಾಯಭಾರಿಗಳ ಸಮ್ಮುಖದಲ್ಲಿ ರಾಜನಾಥ್ ಸಿಂಗ್ ಹೊಸದಿಲ್ಲಿಯ ತಮ್ಮ ನಿವಾಸದಲ್ಲಿ ನೀರನ್ನು ಸ್ವೀಕರಿಸಿದರು.
‘ಈಗಾಗಲೇ ಕೆಲವು ದೇಶಗಳಿಂದ ನೀರು ಬಂದು ತಲುಪಿದೆ. ಬಾಕಿ ಉಳಿದ 77 ರಾಷ್ಟ್ರಗಳ ನೀರನ್ನೂ ಎನ್ಜಿಒ ಸಂಗ್ರಹಿಸುತ್ತದೆಂಬ ವಿಶ್ವಾಸವಿದೆ. ಇದನ್ನು ನಾವು ರಾಮಲಲ್ಲಾನ ಜಲಾಭಿಷೇಕಕ್ಕೂ ಬಳಸಿಕೊಳ್ಳುತ್ತೇವೆ’ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
‘ಅಯೋಧ್ಯೆಯಲ್ಲಿ ಸಪ್ತಸಾಗರ ಎಂಬ ಸ್ಥಳವಿದೆ. ರಾಮನ ಪಟ್ಟಾಭಿಷೇಕದ ಸಮಯದಲ್ಲಿ ಪ್ರಪಂಚದ ಎಲ್ಲ ಸಾಗರಗಳಿಂದ ನೀರು ತರಲಾಗಿತ್ತು’ ಎಂದು ಸಚಿವರು ತಿಳಿಸಿದರು.
ಡೆನ್ಮಾರ್ಕ್, ಫಿಜಿ, ನೈಜೀರಿಯಾ ಸೇರಿದಂತೆ ಹಲವು ರಾಷ್ಟ್ರಗಳ ರಾಜತಾಂತ್ರಿಕ ಅಧಿಕಾರಿಗಳು, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಈ ವೇಳೆ ಉಪಸ್ಥಿತರಿದ್ದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…