ಅ.2 ರ ಒಳಗೆ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ, ಇಲ್ಲವಾದರೆ ಜಲಸಮಾಧಿ ಆಗುತ್ತೇನೆ ಎಂದು ತಪಸ್ವಿ ಚಾವಣಿಯ ಉತ್ತರಾಧಿಕಾರಿ ಮಹಂತ್ ಪರಮಹಂಸ ದಾಸ್ ಹೇಳಿದ್ದಾರೆ.
ಹಿಂದೂ ರಾಷ್ಟ್ರ ಎಂದು ಘೋಷಿಸಲು ಅ.2 ಕೊನೆಯ ದಿನ. ಘೋಷಿಸದೇ ಹೋದರೆ ಸರಯೂ ನದಿಯಲ್ಲಿ ಜಲಸಮಾಧಿಯಾಗುತ್ತೇನೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲ, ಮುಸ್ಲಿಮರ ಹಾಗೂ ಕ್ರಿಶ್ಚಿಯನ್ನರ ರಾಷ್ಟ್ರೀಯತೆಯನ್ನು ಕೊನೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ನನಗಾಗಿ ಮಾಡುತ್ತಿರುವ ಒತ್ತಾಯ ಅಲ್ಲ, ದೇಶದ ಜನರ ಹಿತಾಸಕ್ತಿಗೆ ಹಾಗೂ ಸಾಮಾಜಿಕ ಹಿತದೃಷ್ಟಿಯಿಂದ ಆಗಬೇಕಾಗಿರುವ ನಡೆ. ನಾನು ಈಗಾಗಲೇ ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರ ಮುಂದೆ ಬೇಡಿಕೆ ಇಟ್ಟಿದ್ದೇನೆ ಎಂದಿದ್ದಾರೆ.