ಮುಂಬೈ : ಆರ್ಯನ್ ಖಾನ್ಗೆ ಮುಂಬೈನ ಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಅಕ್ಟೋಬರ್ 20ರಂದು ಜಾಮೀನು ನೀಡೋಕೆ ಸಾಧ್ಯವಿಲ್ಲ ಎಂದು ಹೇಳಿತ್ತು.
ಇದಾದ ಬೆನ್ನಲ್ಲೇ ಆರ್ಯನ್ ಖಾನ್ ಸೇರಿ 8 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 30ರವರೆಗೆ ವಿಸ್ತರಣೆ ಮಾಡಿ ಎನ್ಸಿಬಿ ಕೋರ್ಟ್ ಆದೇಶ ಹೊರಡಿಸಿದೆ.
ಆರ್ಯನ್ ಪರ ವಕೀಲರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ವಿಚಾರಣೆ ನಡೆದು, ತೀರ್ಪು ಬರುವವರೆಗೆ ಮತ್ತೊಂದಷ್ಟು ದಿನ ಆರ್ಯನ್ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.