News Karnataka Kannada
Saturday, April 27 2024
ದೇಶ

ಉಡುಗೊರೆ ಹರಾಜಿನಲ್ಲಿ ಪಾಲ್ಗೊಳ್ಳಿ: ಮೋದಿ ಸಲಹೆ

Primeminister Modi 29072021
Photo Credit :

ಲಖನೌ: ಹಲವು ವರ್ಷಗಳಿಂದ ತಾವು ಪಡೆದ ಉಡುಗೊರೆಗಳು ಮತ್ತು ಸ್ಮರಣಿಕೆಗಳನ್ನು ಹರಾಜಿಗೆ ಇಡಲಾಗಿದ್ದು ಜನರು ಇದರಲ್ಲಿ ಭಾಗವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಹರಾಜಿನಿಂದ ಬರುವ ಹಣ ‘ನವಾಮಿ ಗಂಗೆ’ ಯೋಜನೆಗೆ ಬಳಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

‘ಕೆಲವು ವರ್ಷಗಳಿಂದ ನಾನು ಹಲವಾರು ಉಡುಗೊರೆ ಮತ್ತು ಸ್ಮರಣಿಕೆಗಳನ್ನು ಸ್ವೀಕರಿಸಿದ್ದೇನೆ. ಇದನ್ನು ಹರಾಜು ಮಾಡಲಾಗುತ್ತಿದೆ. ಇದರಲ್ಲಿ ಒಲಿಂಪಿಕ್‌ ವಿಜೇತರು ನೀಡಿದ ವಿಶೇಷ ಸ್ಮರಣಿಕೆಗಳೂ ಇದ್ದು ಜನರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು’ ಎಂದು ಟ್ವೀಟ್‌ ಮಾಡಿದ್ದಾರೆ.

ಗಂಗಾ ನದಿಯ ಸಂರಕ್ಷಣೆ ಮತ್ತು ಪುನರುಜ್ಜೀವನದ ಗುರಿಯನ್ನು ‘ನವಾಮಿ ಗಂಗೆ’ ಯೋಜನೆ ಹೊಂದಿದೆ.

ಸಂಸ್ಕೃತಿ ಸಚಿವಾಲಯವು ಕೈಗೊಂಡ ಹರಾಜು ಪ್ರಕ್ರಿಯೆಯಲ್ಲಿ ಕ್ರೀಡಾ ಸಲಕರಣೆಗಳು ಮತ್ತು ಕೃಷ್ಣಾನಗರದ ಬಾಡ್ಮಿಂಟನ್‌ ರಾಕೆಟ್‌ಗಳೂ ಸೇರಿದ್ದು ಇ– ಹರಾಜಿನಲ್ಲಿ ಗರಿಷ್ಠ ಬಿಡ್‌ಗಳನ್ನು ಕಂಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು