ಉತ್ತರಾಖಂಡದ ಮಳೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ‌ -ಅಮಿತ್ ಶಾ

ನವದೆಹಲಿ: ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ (ನಿವೃತ್ತ) ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಉತ್ತರಾಖಂಡದ ಮಳೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಉತ್ತರಾಖಂಡದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹಗಳು ಮತ್ತು ಭೂಕುಸಿತಗಳು ಕಳೆದ ಕೆಲವು ದಿನಗಳಲ್ಲಿ 54 ಜನರನ್ನು ಬಲಿ ತೆಗೆದುಕೊಂಡಿದೆ.ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉಂಟಾದ ಪರಿಸ್ಥಿತಿಯ ಅವಲೋಕನಕ್ಕಾಗಿ ಕೇಂದ್ರ ಗೃಹ ಸಚಿವರು ಗುರುವಾರ ಡೆಹ್ರಾಡೂನ್ ತಲುಪಿದರು.

ಏತನ್ಮಧ್ಯೆ, ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಅವರು ಗುರುವಾರ ಬದರಿನಾಥ ಧಾಮಕ್ಕೆ ಸಣ್ಣ ಮತ್ತು ಲಘು ವಾಹನಗಳ ಮಾರ್ಗವನ್ನು ತೆರೆಯಲಾಗಿದೆ ಎಂದು ಹೇಳಿದರು.

ನೈನಿತಾಲ್‌ನಿಂದ ರಾಮಗಡ ಮತ್ತು ಮುಕ್ತೇಶ್ವರಕ್ಕೆ ಹೋಗುವ ರಸ್ತೆ ಮಾರ್ಗವೂ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.”ಬದರಿನಾಥ ಧಾಮಕ್ಕೆ ಸಣ್ಣ/ಲಘು ವಾಹನಗಳ ಮಾರ್ಗವನ್ನು ತೆರೆಯುವುದರೊಂದಿಗೆ ಚಾರ್ಧಾಮ್ ಯಾತ್ರೆಯನ್ನು ಪುನರಾರಂಭಿಸಲಾಗಿದೆ. ನೈನಿತಾಲ್‌ನಿಂದ ರಾಮಗಡ  ಮತ್ತು ಮುಕ್ತೇಶ್ವರಕ್ಕೆ ಹೋಗುವ ಮಾರ್ಗವೂ ಈಗ ಕಾರ್ಯನಿರ್ವಹಿಸುತ್ತಿದೆ” ಎಂದು ಡಿಜಿಪಿ ಹೇಳಿದರು.ಧಾರಾಕಾರ ಮಳೆಯ ನಡುವೆ, ರಾಜ್ಯದಲ್ಲಿ ರಸ್ತೆಗಳು, ಕಟ್ಟಡಗಳು ಮತ್ತು ತುಂಬಿ ಹರಿಯುತ್ತಿರುವ ನದಿಗಳು ಜನರನ್ನು ವಿವಿಧ ಸ್ಥಳಗಳಲ್ಲಿ ಸಿಲುಕಿಸಿವೆ.

Swathi MG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

5 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

7 hours ago