ಪಂಜಾಬ್ ನಲ್ಲಿ ಕಾಂಗ್ರೆಸ್ ಗೆ ಉಳಿಗಾಲವಿಲ್ಲ ಎಂದು ಊಹಿಸಿರುವ ಮಾಜಿ ಮುಖ್ಯಮಂತ್ರಿ, ನವಜೀತ್ ಸಿಂಗ್ ಸಿಧುವನ್ನು ಬಾಲಿಶ: ವ್ಯಕ್ತಿ ಎಂದು ಕರೆದಿದ್ದಾರೆ. 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ ನನ್ನದೇ ಆದ ಸಿದ್ದಾಂತಗಳು, ನಂಬಿಕೆಗಳಿವೆ. ಅದೇ ರೀತಿಯಲ್ಲಿ ನಡೆದುಕೊಂಡಿದ್ದೇನೆ. ಬೆಳಗ್ಗೆ 10-30ರ ಸುಮಾರಿನಲ್ಲಿ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ಕೇಳುತ್ತಾರೆ. ಯಾವುದೇ ಪ್ರಶ್ನೆಗಳನ್ನು ನನ್ನ ಎತ್ತಲಿಲ್ಲ. ಈಗಲೇ ರಾಜೀನಾಮೆ ಕೊಡುವುದಾಗಿ ಹೇಳಿ, 4 ಗಂಟೆಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದೇನೆ. 50 ವರ್ಷಗಳ ನಂತರ ನನ್ನ ಮೇಲೆ ಅಪನಂಬಿಕೆ, ವಿಶ್ವಾಸವಿಲ್ಲದಂತಹ ಪಕ್ಷದಲ್ಲಿ ಯಾವ ಅರ್ಥದಲ್ಲಿ ಇರಲಿ ಎಂದು ಅವರು ಪ್ರಶ್ನಿಸಿದರು.
ಈ ರೀತಿಯಲ್ಲಿ ನನನ್ನು ನೋಡಿಕೊಳ್ಳಲಾಗುತ್ತದೆ ಎಂಬುದನ್ನು ಊಹಿಸಿರಲಿಲ್ಲ. ಈವರೆಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ನಂಬಿಕೆ ಇಲ್ಲದ ಪಕ್ಷದಲ್ಲಿ ಹೇಗೆ ಮುಂದುವರೆಯಲು ಸಾಧ್ಯ, ಎಲ್ಲಿ ನಂಬಿಕೆ ಇರುವುದಿಲ್ಲವೋ ಅಲ್ಲಿ ಯಾರು ಕೂಡಾ ಮುಂದುವರೆಯಬಾರದು ಎಂದರು. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ. ಇದರಲ್ಲಿ ಎರಡು ಮಾತಿಲ್ಲ, ಆದರೆ, ಬಿಜೆಪಿ ಸೇರುವುದಿಲ್ಲ ಎಂದು ಅವರು ಸ್ಪಷ್ಪಪಡಿಸಿದರು .