ದೆಹಲಿ : ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳ ಹೊಸ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ಬುಕ್ ಮತ್ತು ವಾಟ್ಸ್ಆ್ಯಪ್ ಸಲ್ಲಿಸಿದ್ದ ಮನವಿಗಳಿಗೆ ಉತ್ತರಿಸುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಸರ್ಕಾರದ ಹೊಸ ನಿಯಮ ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತಿದ್ದು ಅಸಂವಿಧಾನಿಕವಾಗಿದೆ ಎಂದು ಸೋಷಿಯಲ್ ಮೀಡಿಯಾ ಸಂಸ್ಥೆಗಳು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವು, ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ಪೀಠವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮೂಲಕ, ಅರ್ಜಿಯ ಮೇಲೆ ಉತ್ತರವನ್ನು ಸಲ್ಲಿಸುವಂತೆ ಹಾಗೂ ನಿಯಮಗಳ ಅನುಷ್ಠಾನಕ್ಕೆ ತಡೆ ನೀಡುವಂತೆ ಕೇಂದ್ರಕ್ಕೆ ಸೂಚನೆ ನೀಡಿತು. ಅಕ್ಟೋಬರ್ 22 ರಂದು ವಿಚಾರಣೆ ಮುಂದೂಡಿದೆ.