ದೆಹಲಿ

ಕರೋನಾ ಗುಣಮುಕ್ತರಲ್ಲಿ ಕಾಣಿಸಿಕೊಂಡ ಗ್ಯಾಂಗ್ರೀನ್

ನವದೆಹಲಿ: ಕರೋನಾದಿಂದ ಗುಣಮುಖರಾದ ಐದು ರೋಗಿಗಳಲ್ಲಿ ಪಿತ್ತಕೋಶದ ಗ್ಯಾಂಗ್ರೀನ್ ಕಂಡುಬಂದಿರುವ ವರದಿ ಹೊರಬಂದಿದೆ .

ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರು ಭಾರತದಲ್ಲಿ ಇಂತಹ ಪ್ರಕರಣಗಳ ಮೊದಲ ವರದಿ ಮಾಡಿದ್ದು, ಇದು ವೈದ್ಯರಿಗೆ ಹೊಸ ಸವಾಲಾಗಿದೆ. ಜೂನ್ ಮತ್ತು ಆಗಸ್ಟ್ ನಡುವೆ ಐದು ಕೋವಿಡ್ ರೋಗಿಗಳಿಗೆ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿತ್ತು. ಈ ಐವರಲ್ಲಿ ಇದೀಗ ಪಿತ್ತಕೋಶದ ಗ್ಯಾಂಗ್ರೀನ್ ಕಂಡುಬಂದಿದೆ ಎಂದು ಹೇಳಲಾಗಿದೆ.

ಈ ಐದು ರೋಗಿಗಳ ಪೈಕಿ ನಾಲ್ಕು ಪುರುಷರು ಮತ್ತು ಮಹಿಳೆಯರು ಸೇರಿದ್ದು, ಇವರೆಲ್ಲರ ವಯಸ್ಸು 37 ರಿಂದ 75 ರ ನಡುವೆ ಇದೆ ಎನ್ನಲಾಗಿದೆ. ಈ ಎಲ್ಲಾ ರೋಗಿಗಳು ಜ್ವರ, ಹೊಟ್ಟೆಯ ಬಲ ಮೇಲ್ಭಾಗದ ನೋವು ಮತ್ತು ವಾಂತಿಯಿಂದ ಬಳಲುತ್ತಿದ್ದರು.  ಈ ಪೈಕಿ ಇಬ್ಬರು ಮಧುಮೇಹ ಮತ್ತು ಒಬ್ಬರು ಹೃದ್ರೋಗದಿಂದ ಬಳಲುತ್ತಿದ್ದರು. ಕೋವಿಡ್-19 ರೋಗಲಕ್ಷಣಗಳ ನಿರ್ವಹಣೆಗಾಗಿ ಮೂವರು ರೋಗಿಗಳು ಸ್ಟಿರಾಯ್ಡ್‌ಗಳನ್ನು ಪಡೆದಿದ್ದರು ಎನ್ನಲಾಗಿದೆ.

ಈ ಬಗ್ಗೆ ಮಾತನಾಡಿರುವ ಆಸ್ಪತ್ರೆಯ ಯಕೃತ್ತಿನ ಸಂಸ್ಥೆ, ಗ್ಯಾಸ್ಟ್ರೋಎಂಟರಾಲಜಿ ಮತ್ತು ಪ್ಯಾಂಕ್ರಿಯಾಟಿಕೊಬಿಲಿಯರಿ ಸೈನ್ಸಸ್‌ನ ಅಧ್ಯಕ್ಷ ಡಾ.ಅನಿಲ್ ಅರೋರಾ ಅವರು, ‘ನಾವು ಜೂನ್ ಮತ್ತು ಆಗಸ್ಟ್ ನಡುವೆ ಇಂತಹ ಐದು ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದೇವೆ. ಕೋವಿಡ್ -19 ನಿಂದ ಚೇತರಿಸಿಕೊಂಡ ನಂತರ, ಈ ರೋಗಿಗಳಿಗೆ ಪಿತ್ತಕೋಶದಲ್ಲಿ ತೀವ್ರವಾದ ಪಿತ್ತಕೋಶದ ಉರಿಯೂತ ಉಂಟಾಗಿತ್ತು. ಇಂತಹ ಸಂದರ್ಭದಲ್ಲಿ ಪಿತ್ತಕೋಶದ ಗ್ಯಾಂಗ್ರೀನ್‌ಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿರುತ್ತದೆ ಎಂದು ಹೇಳಿದರು.

ಅಂತೆಯೇ ಕೋವಿಡ್ -19 ಸೋಂಕಿನಿಂದ ಚೇತರಿಸಿಕೊಂಡ ನಂತರ ಪಿತ್ತಕೋಶದ ಗ್ಯಾಂಗ್ರೀನ್ ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಂತೆಯೇ ಕೇವಲ 10 ಪ್ರತಿಶತದಷ್ಟು ರೋಗಿಗಳು ಪಿತ್ತಕೋಶದ ಕಲ್ಲು ಅಥವಾ ಸಿಸ್ಟಿಕ್ ಡಕ್ಟ್ ತೊಂದರೆಯ ಪುರಾವೆಗಳಿಲ್ಲದೆ ಪಿತ್ತಕೋಶದ ಉರಿಯೂತವಾಗಿರುವ “ಅಕಾಲಕ್ಯುಲಸ್ ಕೊಲೆಸಿಸ್ಟೈಟಿಸ್” ಅನ್ನು ಹೊಂದಿದ್ದಾರೆ. ಕೋವಿಡ್ -19 ರೋಗಲಕ್ಷಣಗಳು ಮತ್ತು “ಅಕಾಲ್ಕುಲಸ್ ಕೊಲೆಸಿಸ್ಟೈಟಿಸ್” ನ ರೋಗನಿರ್ಣಯದ ನಡುವಿನ ಸರಾಸರಿ ಅವಧಿ ಎರಡು ತಿಂಗಳುಗಳಾಗಿದ್ದು, ಅಲ್ಟ್ರಾಸೌಂಡ್ ಮತ್ತು ಹೊಟ್ಟೆಯ CT ಸ್ಕ್ಯಾನ್ ಮೂಲಕ ರೋಗನಿರ್ಣಯವನ್ನು ದೃಢಪಡಿಸಬಹುದಾಗಿದೆ. ಈ ಎಲ್ಲಾ ರೋಗಿಗಳಿಗೆ ಯಶಸ್ವಿಯಾಗಿ ಲ್ಯಾಪ್ರೊಸ್ಕೋಪಿಕ್ ನೆಕ್ರೋಟಿಕ್ ಮೂಲಕ ಸೋಂಕಿತ ಪಿತ್ತಕೋಶವನ್ನು ತೆಗೆಯಲಾಗಿದೆ  ಎಂದು ಹೇಳಿದರು.

ಇದು ಸಾಮಾನ್ಯವಾಗಿ ಮಧುಮೇಹ, ಎಚ್‌ಐವಿ ಸೋಂಕು, ನಾಳೀಯ ರೋಗ, ದೀರ್ಘಕಾಲದ ಉಪವಾಸದಲ್ಲಿರುವವರು, ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಮತ್ತು ಆಘಾತ, ಸುಟ್ಟಗಾಯಗಳು ಮತ್ತು ಸೆಪ್ಸಿಸ್‌ಗಳ ಇತಿಹಾಸ ಹೊಂದಿರುವ ರೋಗಿಗಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ ಎಂದು ಆರೋರಾ ಹೇಳಿದರು.

Raksha Deshpande

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

30 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

37 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

48 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

1 hour ago