ನವದೆಹಲಿ: ಅಕ್ಟೋಬರ್ ನಲ್ಲಿ ಕರೋನಾ 3ನೇ ಅಲೆ ಉತ್ತುಂಗಕ್ಕೇರಲಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ವರದಿ ಮಾಡಿದೆ.
ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಸ್ಥಾಪಿಸಲಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ (NIDM) ಅಡಿಯಲ್ಲಿ ರಚಿಸಲಾದ ತಜ್ಞರ ಸಮಿತಿಯು ಈ ಕುರಿತಂತೆ ವರದಿ ನೀಡಿದ್ದು, ಕೊವಿಡ್ -19 ರ ಮೂರನೇ ತರಂಗವು ಅಕ್ಟೋಬರ್ ವೇಳೆಗೆ ಉತ್ತುಂಗಕ್ಕೇರಬಹುದು ಎಂದು ಹೇಳಿದೆ. ಅಲ್ಲದೆ ಈ ವರದಿಯನ್ನು ಪ್ರಧಾನಮಂತ್ರಿ ಕಚೇರಿಗೆ ಸಲ್ಲಿಸಲಾಗಿದೆ.
ಅಂತೆಯೇ ಈ ವರದಿಯಲ್ಲಿ ಇಂತಹ ಸನ್ನಿವೇಶಗಳನ್ನು ಎದುರಿಸಲು ದೇಶದಾದ್ಯಂತ ಇರುವ ಮಕ್ಕಳ ಸೌಲಭ್ಯಗಳು ಅಸಮರ್ಪಕವಾಗಿರುವುದನ್ನು ಎತ್ತಿ ತೋರಿಸಿದ್ದು, ವೈದ್ಯಕೀಯ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ಆರೋಗ್ಯ ಸೌಲಭ್ಯಗಳನ್ನು ಹೆಚ್ಚಿಸಲು ಕರೆ ನೀಡಿದೆ ಎಂದು ಹೇಳಲಾಗಿದೆ.
ವೈದ್ಯಕೀಯ ಸೌಲಭ್ಯಗಳ ಕೊರತೆ, ವೈದ್ಯರು, ಸಿಬ್ಬಂದಿ ಕೊರತೆ ಮತ್ತು ಅಂತಹ ಸನ್ನಿವೇಶಗಳನ್ನು ಎದುರಿಸಲು ವೆಂಟಿಲೇಟರ್ಗಳು, ಆಂಬ್ಯುಲೆನ್ಸ್ಗಳಂತಹ ಉಪಕರಣಗಳ ಕೊರತೆಯ ಬಗ್ಗೆ ವರದಿ ಎಚ್ಚರಿಸಿದೆ. ಈಗಿರುವ ವೈದ್ಯಕೀಯ ಸೌಲಭ್ಯಗಳು ಹೆಚ್ಚಿನ ಸಂಖ್ಯೆಯ ಮಕ್ಕಳು ಸೋಂಕಿಗೆ ಒಳಗಾದ ಸಂದರ್ಭದಲ್ಲಿ ಸಾಕಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…