ನವದೆಹಲಿ, : ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಪ್ರಶಾಂತ್ ಕಿಶೋರ್ ಚರ್ಚೆ ನಡೆಸಿದ ಒಂದು ದಿನದ ನಂತರ, ಚುನಾವಣಾ ಚಾಣಕ್ಯ ಭಾರತದ ಪ್ರಮುಖ ವಿರೋಧ ಪಕ್ಷಕ್ಕೆ ಸೇರುತ್ತಾರೆಯೇ ಎಂಬ ಬಗ್ಗೆ ಊಹಾಪೋಹಗಳು ತೀವ್ರಗೊಂಡಿವೆ. ಮೂವರೂ ಗಾಂಧಿಗಳು ಮಂಗಳವಾರ ರಾಹುಲ್ ಗಾಂಧಿ ನಿವಾಸದಲ್ಲಿ ಪ್ರಶಾಂತ್ ಕಿಶೋರ್ ಜೊತೆ ಚರ್ಚೆಯ ಭಾಗವಾಗಿದ್ದರು. ಮೂವರು ಗಾಂಧಿಗಳು ಹಾಗೂ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷವನ್ನು ಬಲಾಡ್ಯಗೊಳಿಸುವ ಹಾಗೂ ಮುಂದಿನ ಚುನಾವಣೆಗಳನ್ನು ಸಿದ್ಧಪಡಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಮೂಲಗಳ ಪ್ರಕಾರ ಇದು ಮೊದಲ ಬಾರಿಗೆ ನಡೆದದ್ದಲ್ಲ. ಈ ನಡುವೆ ಈ ಸಭೆಯು ಪಂಜಾಬ್ ಅಥವಾ ಉತ್ತರ ಪ್ರದೇಶದ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಾಗಿಲ್ಲ ಎಂದು ಮೂಲಗಳು ತಿಳಿಸಿದೆ. ಆದರೆ 2024 ರ ಚುನಾವಣಾ ಹೋರಾಟಕ್ಕೆ ಕಾಂಗ್ರೆಸ್ ಅನ್ನು ಸಿದ್ಧಪಡಿಸುವಲ್ಲಿ ಪ್ರಶಾಂತ್ ಕಿಶೋರ್ ಮಹತ್ವದ ಪಾತ್ರವನ್ನು ವಹಿಸುವುದರ ಬಗ್ಗೆ ನಡೆಸಲಾಗಿದೆ ಎನ್ನಲಾಗಿದೆ. ಈ ಹಿಂದೆ ಎನ್ಡಿಟಿವಿ ಜೊತೆಗೆ ಮಾತನಾಡಿದ್ದ ಕಿಶೋರ್, “ನಾನು ಏನು ಮಾಡುತ್ತಿದ್ದೇನೆ ಅದನ್ನು ಮುಂದುವರಿಸಲು ನಾನು ಬಯಸುವುದಿಲ್ಲ. ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಇನ್ನು ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಜಾಗವನ್ನು ತ್ಯಜಿಸಲು ಬಯಸುತ್ತೇನೆ,” ಎಂದು ಹೇಳುವ ಮೂಲಕ ನಿವೃತ್ತಿ ಘೋಷಣೆ ಮಾಡಿದ್ದರು. ಇದಕ್ಕೂ ಒಂದು ದಿನ ಮುಂಚೆ ಪ್ರಶಾಂತ್ ಚುನಾವಣಾ ಪ್ರಚಾರ ಮಾಡಿದ್ದ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಹಾಗೂ ತಮಿಳುನಾಡಿನ ಎಂ.ಕೆ.ಸ್ಟಾಲಿನ್ ಗೆಲುವು ಆಗಿತ್ತು.
ಇನ್ನು ಮತ್ತೆ ರಾಜಕೀಯಕ್ಕೆ ಸೇರುತ್ತಾರೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಶಾಂತ್ ಕಿಶೋರ್, “ನಾನು ವಿಫಲ ರಾಜಕಾರಣಿ. ನಾನು ಏನು ಮಾಡಬೇಕು ಎಂಬುದನ್ನು ನಾನು ಹಿಂತಿರುಗಿ ನೋಡಬೇಕು,” ಎಂದು ಹೇಳಿದ್ದರು. ಹಾಗೆಯೇ ತನ್ನ ಕುಟುಂಬದೊಂದಿಗೆ ಅಸ್ಸಾಂಗೆ ಹೋಗಿ ಅಲ್ಲಿ, “ಚಹಾ ತೋಟಗಾರಿಕೆ” ಮಾಡುವ ಬಗ್ಗೆಯೂ ಪ್ರಶಾಂತ್ ಮಾತನಾಡಿದ್ದರು.ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇ ಕಿಶೋರ್ ರಾಜಕೀಯಕ್ಕೆ ಮತ್ತೆ ಕಾಲಿಡುವ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಆದರೆ ಈ ಹಿಂದೆ ಕಾಂಗ್ರೆಸ್ ಜೊತೆ ಕಿಶೋರ್ನ ಅನುಭವವೂ ತೃಪ್ತಿಕರವಾಗಿಲ್ಲ. 2017 ರಲ್ಲಿ ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆಗೆ ಸಮಾಜವಾದಿ ಪಕ್ಷದೊಂದಿಗೆ ಒಪ್ಪಂದ ಮಾಡಿಕೊಂಡರೂ ಮೈತ್ರಿ ವಿಫಲವಾಯಿತು, ಬಿಜೆಪಿ ಜಯಗಳಿಸಿತು. ಕಾಂಗ್ರೆಸ್ ಕಾರ್ಯತಂತ್ರವನ್ನು ರೂಪಿಸಿದ ಕಿಶೋರ್ ಪಂಜಾಬ್ನಲ್ಲಿ ಪಕ್ಷದ ಗೆಲುವಿನಿಂದ ಮಾತ್ರ ಸಮಾಧಾನವನ್ನು ಪಡೆದುಕೊಳ್ಳಬೇಕಾಯಿತು.
ಕಾಂಗ್ರೆಸ್ ಸೇರಲಿರುವ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.