News Karnataka Kannada
Thursday, May 02 2024
ದೇಶ

ಕಾಂಗ್ರೆಸ್ ಪಕ್ಷ ತೊರೆದ ಕಾರಣ ಬಹಿರಂಗ ಪಡಿಸದ ಸುಶ್ಮಿತಾ ದೇವ್

Sushmitha Dev 17082021
Photo Credit :

ನವದೆಹಲಿ:  ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿರುವ ಸುಶ್ಮಿತಾ ದೇವ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ  ಕಾರಣವನ್ನು ಬಹಿರಂಗ  ನಿರಾಕರಿಸಿದ್ದಾರೆ. ಅವರು ರಾಹುಲ್ ಮತ್ತು ಸೋನಿಯಾ ಗಾಂಧಿ ಅವರೊಂದಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದ್ದಾರೆ.

ಪಕ್ಷದ ಅಧ್ಯಕ್ಷರಿಗೆ ನನ್ನ ರಾಜಿನಾಮೆ ಕಾರಣವನ್ನು ಪತ್ರದಲ್ಲಿ ನಾನು ವಿವರಿಸಿದ್ದೇನೆ, ಕಾಂಗ್ರೆಸ್ ನನಗೆ ಹಲವು ಅವಕಾಶಗಳನ್ನು ನೀಡಿದೆ., ನನ್ನ 30 ವರ್ಷಗಳ ರಾಜಕೀಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ನಾನು ಯಾವುದೇ ಬೇಡಿಕೆಯಿಟ್ಟಿಲ್ಲ. ಪಕ್ಷ ತೊರೆದಿದ್ದಕ್ಕೆ ನನ್ನನ್ನು ಕಾಂಗ್ರೆಸ್ ಅಧ್ಯಕ್ಷರು ಕ್ಷಮಿಸುತ್ತಾರೆ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಸುಶ್ಮಿತಾ ದೇವ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್​ನ ನಾಯಕತ್ವವನ್ನು ಕಟು ನುಡಿಗಳಿಂದ ಟೀಕಿಸಿದ್ದರು. ಕಾಂಗ್ರೆಸ್ ಕಣ್ಣು ಮುಚ್ಚಿಕೊಂಡು ಮುಂದೆ ಸಾಗುತ್ತಿದೆ ಎಂದು ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು