ನವದೆಹಲಿ: ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ 18 ವರ್ಷ ಮೇಲ್ಪಟ್ಟ ಕಟ್ಟಡ ಕಾರ್ಮಿಕರಿಗೆ ಕೋವಿಡ್ ಲಸಿಕಾ ಅಭಿಯಾನ ನಡೆಸಬೇಕು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಸೂಚಿಸಿದ್ದಾರೆ.
ಈ ಬಗ್ಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. 15 ಅಥವಾ ಅದಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಕಾರ್ಮಿಕರು ಇರುವಲ್ಲಿ ಹತ್ತಿರದ ನಿಗದಿತ ಖಾಸಗಿ ಸ್ಥಳಗಳನ್ನು ಗುರುತಿಸಿ, ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಬೇಕು. ಕಟ್ಟಡ ಕಾರ್ಮಿಕರು ಹೆಚ್ಚಾಗಿ ಕೋವಿಡ್ ಪೀಡಿತರಾಗುತ್ತಿದ್ದಾರೆ. ಸಂಭಾವ್ಯ ಮೂರನೇ ಅಲೆಯ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ರಕ್ಷಣೆ ಒದಗಿಸಬೇಕಿದೆ ಎಂದು ಹೇಳಿದ್ದಾರೆ.
ಖಾಸಗಿ ಆರೋಗ್ಯ ಸಂಸ್ಥೆ ಗಳೊಂದಿಗೆ ಕೈಜೋಡಿಸಿ, ಲಸಿಕಾ ಅಭಿಯಾನವನ್ನು ನಡೆಸಬೇಕು. ಕಾರ್ಮಿಕರು ಹಾಗೂ ಅವರ ಕುಟುಂಬದ ಅರ್ಹ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ ಕ್ರಿಯಾಯೋಜನೆ ರೂಪಿಸಬೇಕು ಎಂದು ಸೂಚನೆ ನೀಡಿದ್ದಾರೆ.