News Karnataka Kannada
Saturday, April 27 2024
ಮುಂಬೈ

ಕಾಲಹರಣ ಮಾಡದೆ ಓದು ಎಂದಿದ್ದಕ್ಕೆ ತಾಯಿಯನ್ನು ಕೊಂದ ಬಾಲಕಿ

Death Body 08082021
Photo Credit :
ಮುಂಬೈ : ಓದುವಂತೆ ಒತ್ತಾಯ ಪಡಿಸಿದ  ತಾಯಿಯನ್ನು  15 ವರ್ಷದ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ  ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಅಮಾನವೀಯ  ಘಟನೆ  ಮುಂಬೈನಲ್ಲಿ ನಡೆದಿದೆ.

ಜುಲೈ ೩೦ ರಂದೇ ನವಿ ಮುಂಬೈನ ಐರೋಲಿ ಪ್ರದೇಶದಲ್ಲಿ ಮಹಿಳೆಯೋರ್ವಳು ಮೃತಪಟ್ಟಿರುವ ಬಗ್ಗೆ ವರದಿಯಾಗಿತ್ತು. ಆ ಸಂದರ್ಭದಲ್ಲಿ ಮಹಿಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸತ್ತಿದ್ದಾರೆ ಎಂದು ಆಕೆಯ ೧೫ ವರ್ಷದ ಮಗಳು ಹೇಳಿಕೆ ನೀಡಿದ್ದಳು. ಪೊಲೀಸರು ಕೂಡಾ ಅದನ್ನು ಸಹಜ ಸಾವು ಎಂದು ದಾಖಲಿಸಿಕೊಂಡಿದ್ದರು.
ಮಗಳನ್ನು ಮೆಡಿಕಲ್ ಓದಿಸಬೇಕೆನ್ನುವ ಅದಮ್ಯ ಆಸೆಯನ್ನು ಇಟ್ಟುಕೊಂಡಿದ್ದ ತಾಯಿ ಮತ್ತು ಮಗಳ ನಡುವೆ ಅದೇ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಬಾಲಕಿಗೆ ಮೆಡಿಕಲ್ ಕೋರ್ಸ್ ಓದಲು ಇಷ್ಟವಿರಲಿಲ್ಲ. ಮಹಿಳೆ ಸಾಯುವುದಕ್ಕೂ ಒಂದು ತಿಂಗಳ ಹಿಂದೆ, ಓದುವ ವಿಚಾರವಾಗಿ ತಾಯಿ ತನಗೆ ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಳು. ಆ ಸಂದರ್ಭದಲ್ಲಿ ಪೊಲೀಸರು ಮನೆಯವರನ್ನು ಕರೆಸಿ ಸಮಾಲೋಚನೆ ನಡೆಸಿ ಕುಟುಂಬಸ್ಥರಿಗೆ ತಿಳಿ ಹೇಳಿದ್ದರು. ಆದರೆ ಪರಿಸ್ಥಿತಿ ಕೊಲೆಯ ಮಟ್ಟಕ್ಕೆ ಬರುತ್ತದೆ ಎಂದು ಅವರು ಎಣಿಸಿರಲಿಲ್ಲ.
ಶವದ ಮರಣೋತ್ತರ ಪರೀಕ್ಷೆಯ ವೇಳೆ ಮಹಿಳೆಯ ಸಾವು ಆಕಸ್ಮಿಕವಲ್ಲ, ಆಕೆಯನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎನ್ನುವುದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಾಲಕಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಕೃತ್ಯ ಬಯಲಾಗಿದೆ. ಬಾಲಕಿ ವಿರುದ್ಧ ಪೊಲೀಸರು ಸೆಕ್ಷನ್ ೩೦೨ರ ಅಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು