ನವದೆಹಲಿ , ;ನೂತನ ಕೃಷಿ ಕಾಯ್ದೆಗಳಿಂದ ಬಿಜೆಪಿಯ ಕೋಟ್ಯಾಧಿಪತಿ ಸ್ನೇಹಿತರಿಗೆ ಮಾತ್ರ ಲಾಭ ತಂದುಕೊಡಲಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಬಿಜೆಪಿಯ ಕೋಟ್ಯಧಿಪತಿ ಸ್ನೇಹಿತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ನೂತನ ಮೂರು ಕೃಷಿ ಕಾನೂನುಗಳನ್ನು ರೂಪಿಸಿದೆ ಎಂದು ಅವರು ಟ್ವಿಟರ್ ನಲ್ಲಿ ಟೀಕಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಅದಾನಿ, ಪ್ರತಿ ಕೆ.ಜಿ ಸೇಬು ದರವನ್ನು 16ರೂ ಕಡಿಮೆ ಮಾಡಿರುವ ವರದಿಯನ್ನು ಉಲ್ಲೇಖಿಸಿರುವ ಅವರು, ರೈತರ ಉತ್ಪನ್ನಗಳನ್ನು ನಿರ್ಧರಿಸುವ ಹಕ್ಕನ್ನು ಆಡಳಿತ ಪಕ್ಷದ ಕೋಟ್ಯಧಿಪತಿ ಸ್ನೇಹಿತರಿಗೆ ನೀಡಿದರೆ ಹೀಗೆ ಆಗುತ್ತದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ರೈತರ ಸಂಕಷ್ಟಕ್ಕೆ ಗುರಿಯಾಗಲು ಕಾರಣವಾಗಿದೆ ಎಂದು ಹೇಳಿದರು.
ರೈತರ ಶ್ರಮದಿಂದ ಬೆಳೆದ ಬೆಳೆಗಳಿಗೆ ಬೆಲೆ ಮತ್ತು ಇತರ ವಸ್ತುಗಳನ್ನು ನಿರ್ಧರಿಸುವ ಹಕ್ಕನ್ನು ಬಿಜೆಪಿಯ ಕೋಟ್ಯಧಿಪತಿ ಗೆಳೆಯರಿಗೆ ನೀಡಿದರೆ ಇದು ಸಂಭವಿಸುತ್ತದೆ ಎಂದು ಹಿಂದಿಯಲ್ಲಿ ಅವರು ಟ್ವೀಟ್ ಮಾಡಿದ್ದಾರೆ.ಈ ಹಿಂದೆಯೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳು ಜನವಿರೋಧಿಯಾಗಿವೆ . ಕೂಡಲೇ ಈ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದ್ದರು.
ಕೃಷಿ ಕಾಯ್ದೆ ಬಿಜೆಪಿಯ ಕೋಟ್ಯಧಿಪತಿಗಷ್ಟೇ ಲಾಭ, ಪ್ರಿಯಾಂಕಾ ಟೀಕೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.