ಪಂಜಾಬ್ : ಕೇಂದ್ರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಈ ಕುರಿತು ಭಾರತಿಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ಟಿಕಾಯತ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಸೆ.27ರಂದು ಭಾರತ್ ಬಂದ್ ಗೆ ಕರೆ ನೀಡಿದ್ದೇವೆ. ಕೇಂದ್ರದ ವಿರುದ್ಧ ಬಹಳ ಪರಿಣಾಮಕಾರಿಯಾಗಿ ನಮ್ಮ ಹಕ್ಕುಗಳನ್ನು ಮಂಡಿಸಲಿದ್ದೇವೆ ಎಂದಿದ್ದಾರೆ.
ಪಂಜಾಬ್ ನ 32 ರೈತ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಕೇಸುಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದೇವೆ. ಇದಕ್ಕಾಗಿ ಸೆ.8 ರಂದು ಗಡುವು ನೀಡಲಾಗಿದೆ ಎಂದು ಹೇಳಿದರು. ಕಳೆದ ತಿಂಗಳು ರೈತರ ಮೇಲೆ ನಡೆದ ಲಾಠಿ ಚಾರ್ಜ್ ವಿರುದ್ಧ ಸೆಪ್ಟೆಂಬರ್ 7 ರಂದು ಕರ್ನಾಲ್ನಲ್ಲಿ ಮಹಾಪಂಚಾಯತ್ಗೆ ಕರೆ ನೀಡಲಾಗಿದೆ. . ಇದಕ್ಕೆ ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ 300 ಕ್ಕೂ ಹೆಚ್ಚು ರೈತ ಸಂಘಗಳು ಭಾರತ್ ಬಂದ್ ಗೆ ಬೆಂಬಲ ನೀಡಿಲಿದೆ.