News Karnataka Kannada
Friday, May 03 2024
ದೇಶ

ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಸಹಕಾರಿ ನೀತಿಯನ್ನು ಹೊರತರಲಿದೆ : ಸಚಿವ ಅಮಿತ್ ಶಾ

Amith Shah 29082021
Photo Credit :

ದೆಹಲಿ : ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಸಹಕಾರಿ ನೀತಿಯನ್ನು ಹೊರತರಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ರಾಷ್ಟ್ರೀಯ ಸಹಕಾರಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ,ಈ ವರ್ಷದ ಜುಲೈನಲ್ಲಿ ಸಹಕಾರ ಸಚಿವಾಲಯವನ್ನು ರಚಿಸಲಾಯಿತು. ಸಹಕಾರಿ ವಲಯ ರಾಜ್ಯದ ವಿಷಯವಾಗಿರುವುದರಿಂದ ಕೇಂದ್ರ ಸರ್ಕಾರ ಏಕೆ ಈ ಹೊಸ ಸಚಿವಾಲಯವನ್ನು ರಚಿಸಿತು ಎಂದು ಕೆಲವರು ಆಶ್ಚರ್ಯ ಪಡುತ್ತಾರೆ. ಆದರೆ ಅದಕ್ಕೆ ಕಾನೂನಾತ್ಮಕ ಪ್ರತಿಕ್ರಿಯೆ ನೀಡುತ್ತೇವೆ. ಈ ಬಗ್ಗೆ ನಾನು ಹೆಚ್ಚು ವಾದ ಮಾಡಲು ಬಯಸುವುದಿಲ್ಲ ಎಂದರು.

ಈ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಸಹಕರಿಸುತ್ತದೆ ಮತ್ತು “ಯಾವುದೇ ಘರ್ಷಣೆ ಇರುವುದಿಲ್ಲ” ಎಂದು ಅಮಿತ್ ಶಾ ಒತ್ತಿ ಹೇಳಿದರು. ಮುಂದಿನ ಐದು ವರ್ಷಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ಪಿಎಸಿ)ಗಳ ಸಂಖ್ಯೆಯನ್ನು 3 ಲಕ್ಷಕ್ಕೆ ಹೆಚ್ಚಿಸಲಾಗುವುದು. ಪ್ರಸ್ತುತ, ಸುಮಾರು 65,000 ಪಿಎಸಿಗಳಿವೆ ಎಂದರು.

ಈ ಸಮಾವೇಶದಲ್ಲಿ ವಿವಿಧ ಸಹಕಾರಿ ಸಂಘಗಳ 2,100 ಪ್ರತಿನಿಧಿಗಳು ಮತ್ತು ಸುಮಾರು 6 ಕೋಟಿ ಜನ ಆನ್‌ಲೈನ್ ಮೂಲಕ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು