News Karnataka Kannada
Saturday, May 04 2024
ಮಹಾರಾಷ್ಟ್ರ

ಕೊರೊನಾ ಲಸಿಕೆ ಬದಲು ರೇಬಿಸ್‌‌‌ ಚುಚ್ಚುಮದ್ದು

Covid Vaccine
Photo Credit :

ಠಾಣೆ: ಮಹಾರಾಷ್ಟ್ರದ  ಠಾಣೆ  ಜಿಲ್ಲೆಯ ಆರೋಗ್ಯ ಕೇಂದ್ರದಲ್ಲಿ  ಕೊರೊನಾ ಲಸಿಕೆ ಬದಲು ರೇಬಿಸ್ ಲಸಿಕೆ ನೀಡಿದ ದಾದಿಯರ ಹಾಗೂ ವೈದ್ಯರ ಅಮಾನತು.

ರಾಜ್‌ ಕುಮಾರ್‌ ಯಾದವ್‌ ಅವರು ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬೇರೆ ಸಾಲಿನಲ್ಲಿ ನಿಂತಿದ್ದರು. ಲಸಿಕೆ ಹಾಕಿಸಿಕೊಂಡ ಬಳಿಕ ಅವರಿಗೆ ರೇಬಿಸ್‌ ನಿರೋಧಕ ಚುಚ್ಚುಮದ್ದು ನೀಡಲಾಗಿದೆ ಎಂದು ತಿಳಿಸಲಾಗಿದೆ” ಎಂದು ಠಾಣೆ ಮಹಾನಗರ ಪಾಲಿಕೆಯ ವಕ್ತಾರರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ

ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಆರೋಗ್ಯ ಕೇಂದ್ರವೊಂದರಲ್ಲಿ ವ್ಯಕ್ತಿಯೋರ್ವರಿಗೆ ಕೊರೊನಾ ಲಸಿಕೆ ನೀಡುವ ಬದಲು ರೇಬಿಸ್‌ ನಿರೋಧಕ ಚುಚ್ಚುಮದ್ದು ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೈದ್ಯರು ಹಾಗೂ ದಾದಿಯರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ.ಸೋಮವಾರದಂದು ಸ್ಥಳೀಯ ನಿವಾಸಿ ರಾಜ್‌ಕುಮಾರ್‌ ಯಾದವ್‌ ಎನ್ನುವವರು ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಕಲ್ವಾ ಪ್ರದೇಶದ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು.”ವಿಷಯ ತಿಳಿದ ರಾಜ್‌ ಕುಮಾರ್‌ ಯಾದವ್‌ ಅವರು ಗಾಬರಿಗೊಳಗಾದರು, ಆದರೆ, ಯಾವುದೇ ರೀತಿಯಾದ ಗಂಭೀರ ಪರಿಣಾಮಗಳು ಆಗಿಲ್ಲ. ಅವರು ಆರೋಗ್ಯವಾಗಿದ್ದಾರೆ” ಎಂದು ತಿಳಿಸಿದ್ದಾರೆ.”ಈ ಬಗ್ಗೆ ದೂರು ದಾಖಲಿಸಲಾಗಿದ್ದು, ನಿರ್ಲಕ್ಷ್ಯ ವಹಿಸಿದ ಆರೋಪದ ಹಿನ್ನೆಲೆ ಮಹಿಳಾ ವೈದ್ಯರು ಹಾಗೂ ದಾದಿಯನ್ನು ಅಮಾನತುಗೊಳಿಸಲಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು