ನವದೆಹಲಿ : ಪೊಲೀಸ್ ರಕ್ಷಣೆಯಲ್ಲಿದ್ದ ಪತ್ನಿ ತನ್ನ ಪತಿ ಯಿಂದ ಕೊಲೆಯಾದ ಘಟನೆ ದೆಹಲಿಯಲ್ಲಿ ನಡೆದಿದೆ. ಪ್ರಕಾರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ದೆಹಲಿ ಪೊಲೀಸ್ ಇಲಾಖೆ ನ್ಯಾಯಾಲಯಕ್ಕೆ ತಿಳಿಸಿದೆ.
ಆರೋಪಿ ನಂದಾ ನಾಯಕ್ ಎಂಬಾತನ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಆತನ ಪತ್ನಿಯೇ ಪ್ರಮುಖ ಸಾಕ್ಷಿಯಾಗಿದ್ದಳು. ಆತ ಜೂನ್ ತಿಂಗಳಲ್ಲಿ ಬೇಲ್ ಪಡೆದು ಹೊರ ಬಂದಿದ್ದ. ಹೊರಬಂದವನು ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯುವಂತೆ ಪತ್ನಿಯ ಮೇಲೆ ಒತ್ತಡ ಹಾಕಿದ್ದ. ಇದನ್ನು ಆಕೆ ನ್ಯಾಯಾಲಯದ ಗಮನಕ್ಕೆ ತಂದಿದ್ದಳು.
ನ್ಯಾಯಾಲಯ ಆತನ ಬೇಲ್ ರದ್ದುಗೊಳಿಸಿ ಇನ್ನೆರಡು ದಿನಗಳಲ್ಲಿ ಪೊಲೀಸರಿಗೆ ಶರಣಾಗಲು ಸೂಚಿಸಿತ್ತು . ಅಲ್ಲದೆ ಆತನ ಪತ್ನಿ ಜಾರ್ನಾಗೆ ರಕ್ಷಣೆ ಒದಗಿಸುವಂತೆ ಆದೇಶ ಹೊರಡಿಸಿತ್ತು. ಅಷ್ಟರೊಳಗೆ ಆರೋಪಿ ಪತ್ನಿಯ ಸೆರಗಿನಿಂದಲೇ ಆಕೆಯ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಸಾಯಿಸಿದ ಎಂದು ತಿಳಿದುಬಂದಿದೆ.