ನವದೆಹಲಿ: ಕೋವಿಡ್ 19 3ನೇ ಅಲೆ ಅಕ್ಟೋಬರ್ ನಲ್ಲಿ ಉತ್ತುಂಗಕ್ಕೇರಲಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ವರದಿ ಮಾಡಿದೆ.
ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಸ್ಥಾಪಿಸಲಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ (NIDM) ಅಡಿಯಲ್ಲಿ ರಚಿಸಲಾದ ತಜ್ಞರ ಸಮಿತಿಯು ಈ ಕುರಿತಂತೆ ವರದಿ ನೀಡಿದ್ದು, ಕೊವಿಡ್ -19 ರ ಮೂರನೇ ತರಂಗವು ಅಕ್ಟೋಬರ್ ವೇಳೆಗೆ ಉತ್ತುಂಗಕ್ಕೇರಬಹುದು ಎಂದು ಹೇಳಿದೆ. ಅಲ್ಲದೆ ಈ ವರದಿಯನ್ನು ಪ್ರಧಾನಮಂತ್ರಿ ಕಚೇರಿಗೆ ಸಲ್ಲಿಸಲಾಗಿದೆ.
ಅಂತೆಯೇ ಈ ವರದಿಯಲ್ಲಿ ಇಂತಹ ಸನ್ನಿವೇಶಗಳನ್ನು ಎದುರಿಸಲು ದೇಶದಾದ್ಯಂತ ಇರುವ ಮಕ್ಕಳ ಸೌಲಭ್ಯಗಳು ಅಸಮರ್ಪಕವಾಗಿರುವುದನ್ನು ಎತ್ತಿ ತೋರಿಸಿದ್ದು, ವೈದ್ಯಕೀಯ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ಆರೋಗ್ಯ ಸೌಲಭ್ಯಗಳನ್ನು ಹೆಚ್ಚಿಸಲು ಕರೆ ನೀಡಿದೆ ಎಂದು ಹೇಳಲಾಗಿದೆ.
ವೈದ್ಯಕೀಯ ಸೌಲಭ್ಯಗಳ ಕೊರತೆ, ವೈದ್ಯರು, ಸಿಬ್ಬಂದಿ ಕೊರತೆ ಮತ್ತು ಅಂತಹ ಸನ್ನಿವೇಶಗಳನ್ನು ಎದುರಿಸಲು ವೆಂಟಿಲೇಟರ್ಗಳು, ಆಂಬ್ಯುಲೆನ್ಸ್ಗಳಂತಹ ಉಪಕರಣಗಳ ಕೊರತೆಯ ಬಗ್ಗೆ ವರದಿ ಎಚ್ಚರಿಸಿದೆ. ಈಗಿರುವ ವೈದ್ಯಕೀಯ ಸೌಲಭ್ಯಗಳು ಹೆಚ್ಚಿನ ಸಂಖ್ಯೆಯ ಮಕ್ಕಳು ಸೋಂಕಿಗೆ ಒಳಗಾದ ಸಂದರ್ಭದಲ್ಲಿ ಸಾಕಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ…
ಸ್ಯಾಂಡಲ್ವುಡ್ನ ಖ್ಯಾತ ನಟ ಕಾರ್ತಿಕ್ ಜಯರಾಮ್ ಅಲಿಯಾಸ್ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…
ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…
ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕರದ್ದು ಎನ್ನಲಾದ…