News Karnataka Kannada
Monday, April 29 2024
ದೇಶ

‘ಖೇಲ್ ರತ್ನ’ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಹೆಸರು: ಮೋದಿ ಘೋಷಣೆ

Dhyan Chand 06082021
Photo Credit :

ನವದೆಹಲಿ: ‘ರಾಜೀವ್ ಗಾಂಧಿ ಖೇಲ್ ರತ್ನ’ ಪ್ರಶಸ್ತಿಯ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಆಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್‌ನಲ್ಲಿ ಭಾರತದ ಪುರುಷರ ಮತ್ತು ಮಹಿಳೆಯರ ತಂಡ ಅಮೋಘ ಸಾಧನೆ ಮಾಡಿದ ಬೆನ್ನಲ್ಲೇ ಹಾಕಿಯ ದಂತಕತೆಯಾಗಿರುವ ಮೇಜರ್‌ ಧ್ಯಾನ್‌ಚಂದ್‌ ಅವರಿಗೆ ಸರ್ಕಾರ ಗೌರವ ಸಲ್ಲಿಸಿದೆ.

ಮೇಜರ್ ಧ್ಯಾನ್ ಚಂದ್ ಅವರ ಹೆಸರನ್ನು ಖೇಲ್ ರತ್ನ ಪ್ರಶಸ್ತಿಗೆ ಇಡುವಂತೆ ಅನೇಕ ನಾಗರಿಕರಿಂದ ಮನವಿಗಳು ಬಂದಿವೆ. ಆ ಅಭಿಪ್ರಾಯಗಳಿಗಾಗಿ ಅವರನ್ನು ಗೌರವಿಸುತ್ತೇನೆ. ಅವರ ಭಾವನೆಗಳನ್ನು ಗೌರವಿಸಿ ಪ್ರಶಸ್ತಿಯ ಹೆಸರನ್ನು ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಎಂದು ಕರೆಯಲಾಗುವುದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಭಾರತಕ್ಕೆ ಗೌರವ ತಂದುಕೊಟ್ಟ ಮತ್ತು ದೇಶದ ಹೆಮ್ಮೆಯ ಕ್ರೀಡಾಪಟುಗಳಲ್ಲಿ ಮೇಜರ್ ಧ್ಯಾನ್ ಚಂದ್ ಅಗ್ರಗಣ್ಯರು. ದೇಶದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಧ್ಯಾನ್‌ ಚಂದ್ ಅವರ ಹೆಸರನ್ನು ಇಡುವುದು ಸೂಕ್ತವಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು