News Karnataka Kannada
Thursday, May 02 2024
ದೇಶ

ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಾವಣೆ : ಕಾಂಗ್ರೇಸ್ ತಗಾದೆ

Dhyan Chand 06082021
Photo Credit :
ನವದೆಹಲಿ :  ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೇಸ್ ಕೆರಳಿದೆ .
 ಒಲಿಂಪಿಕ್ ವರ್ಷದಲ್ಲಿ ಕ್ರೀಡೆಗೆ ಬಜೆಟ್ ನ್ನು ಕಡಿತಗೊಳಿಸುವ ಮೋದಿ ಸರ್ಕಾರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರನ್ನು ಬದಲಾಯಿಸುವ ಮೂಲಕ ರಾಜಾಕೀಯ  ಮಾಡುತ್ತಿದೆ, ಹಾಗಾದರೆ ಅಹ್ಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ ಮತ್ತು ದೆಹಲಿಯಲ್ಲಿರುವ ಅರುಣ್ ಜೇಟ್ಲಿ ಕ್ರೀಡಾಂಗಣದ ಹೆಸರನ್ನು ಕೂಡ ಬದಲಿಸಿ ದೇಶದ ಕ್ರೀಡಾ ದಿಗ್ಗಜರ ಹೆಸರನ್ನು ಇಡಲಿ ಎಂದು ಹೇಳಿದೆ.
ನಿನ್ನೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ನನಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಹೆಸರಿನಲ್ಲಿ ಘೋಷಣೆ ಮಾಡಿ ಎಂದು ನಾಗರಿಕರಿಂದ ಮನವಿಗಳು ಬರುತ್ತಿವೆ.ಅವರ ಮನೋಭಾವನೆಗಳಿಗೆ ಅನುಗುಣವಾಗಿ ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದರು.
ಹೆಸರು ಬದಲಾವಣೆಯನ್ನು ಸ್ವಾಗತಿಸಿರುವ ಕಾಂಗ್ರೆಸ್, ಅದನ್ನು ಆಯ್ಕೆಯ ಪ್ರಶಸ್ತಿಗಳಿಗೆ ಸೀಮಿತಗೊಳಿಸುವ ಸರ್ಕಾರದ ಕ್ರಮವನ್ನು ಖಂಡಿಸಿದೆ. ಇನ್ನು ಮುಂದೆ ಕ್ರೀಡಾಂಗಣಗಳನ್ನು ಸಹ ಕ್ರೀಡಾಪಟುಗಳ ಹೆಸರಿನಲ್ಲಿಯೇ ಮರುನಾಮಕರಣ ಮಾಡಲಿ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ಇದು ಸರ್ಕಾರದ ರಾಜಕೀಯ ನಡೆ ಎಂದು ಟೀಕಿಸಿರುವ ಅವರು, ಒಲಿಂಪಿಕ್ ವರ್ಷದಲ್ಲಿ ಸರ್ಕಾರದ ಬಜೆಟ್ ನ್ನು 230 ಕೋಟಿ ರೂಪಾಯಿ ಕಡಿತ ಮಾಡಲಾಗಿದೆ. ರೈತರ ಪ್ರತಿಭಟನೆ, ಹಣದುಬ್ಬರದಂತಹ ವಿಷಯಗಳಿಂದ ಜನರ ಗಮನವನ್ನು ಸೆಳೆಯಲು ಮೋದಿ ಸರ್ಕಾರ ಹೀಗೆ ಮಾಡುತ್ತಿದೆ ಎಂದು ಆರೋಪಿಸಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು