ಮಿರ್ಜಾಪುರ: ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಬುಧವಾರ ದೋಣಿ ಮಗುಚಿ ಮೂವರು ಮಕ್ಕಳು ಸೇರಿದಂತೆ ಆರು ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೋಣಿಯಲ್ಲಿ ಒಟ್ಟು 14 ಜನರಿದ್ದರು ಮತ್ತು ಅವರಲ್ಲಿ 8 ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಆದರೆ ಅಖರಾ ಘಾಟ್ ಬಳಿ ನಡೆದ ಘಟನೆಯ ನಂತರ ಮೂವರು ಮಹಿಳೆಯರು ಮತ್ತು ಅನೇಕ ಮಕ್ಕಳು ಕಾಣೆಯಾಗಿದ್ದಾರೆ ಎಂದು ವಿಂಧ್ಯಾಚಲ ಪೊಲೀಸ್ ಠಾಣೆಯ ಹಿರಿಯ ಸಬ್ ಇನ್ಸ್ಪೆಕ್ಟರ್(ಎಸ್ಎಸ್ಐ) ಅಖಿಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಅವರಲ್ಲಿ ಹೆಚ್ಚಿನವರು ಜಾರ್ಖಂಡ್ನ ರಾಂಚಿಯಿಂದ ಬಂದ ಭಕ್ತರು ಎಂದು ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಕ್ಷಿಸಲ್ಪಟ್ಟವರಿಗೆ ಸೂಕ್ತ ಪರಿಹಾರವನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಲಖನೌದಲ್ಲಿ ಅಧಿಕೃತ ವಕ್ತಾರರು ತಿಳಿಸಿದ್ದಾರೆ.