ಲಖನೌ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯವನ್ನು ಮುಸ್ಲಿಂ ಸಮುದಾಯದ ಧರ್ಮಗುರುಗಳು ಸ್ವಾಗತಿಸಿದ್ದಾರೆ ಮತ್ತು ಇಂತಹ ಕ್ರಮವು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಹೆಚ್ಚುತ್ತದೆ ಹಾಗೂ ಏಕತೆಯನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.
ಹೈಕೋರ್ಟ್ ಅಭಿಪ್ರಾಯ ಸ್ವೀಕರಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯರು, ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾ ಅಧ್ಯಕ್ಷರು ಮತ್ತು ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ ಅವರು, ಹೈಕೋರ್ಟ್ ಅಭಿಪ್ರಾಯ ಜಾರಿಗೆ ತರಬೇಕು ಎಂದು ಹೇಳಿದ್ದಾರೆ.
“ನಾನು ಹೈಕೋರ್ಟ್ ಅಭಿಪ್ರಾಯವನ್ನು ಸ್ವಾಗತಿಸುತ್ತೇನೆ. ನಾವು ಈ ದೇಶದಲ್ಲಿ ಅನೇಕ ವರ್ಷಗಳಿಂದ ಸೌಹಾರ್ದತೆ ಮತ್ತು ಸಹೋದರತ್ವದಿಂದ ಬದುಕುತ್ತಿದ್ದೇವೆ. ಮೊಘಲ್ ದೊರೆ ಬಾಬರ್ ಕೂಡ ತನ್ನ ಉತ್ತರಾಧಿಕಾರಿ ಮತ್ತು ಮಗ ಹುಮಾಯೂನ್ ಅವರನ್ನು ಹಿಂದೂ ಭಾವನೆಗಳನ್ನು ಗೌರವಿಸುವಂತೆ ಮತ್ತು ಗೋಹತ್ಯೆಯನ್ನು ನಿಷೇಧಿಸುವಂತೆ ಹೇಳಿದ್ದರು”ಎಂದು ಮೌಲಾನ ತಿಳಿಸಿದ್ದಾರೆ.