ತಮಿಳುನಾಡಿನ ಹೆಲಿಕಾಪ್ಟರ್ ದುರಂತದಲ್ಲಿ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪ್ರಾಣ ಉಳಿಸಲು ವೈದ್ಯರು ತೀವ್ರ ಪ್ರಯತ್ನ ನಡೆಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರ ಪ್ರದೇಶದ ಬಲರಾಮ್ ಪುರದಲ್ಲಿಂದು ಸರಯೂ ನಹರ್ ರಾಷ್ಟ್ರೀಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ, ವರುಣ್ ಸಿಂಗ್ ಅವರ ಜೀವ ಉಳಿಸಲು ಪತೇಶ್ವರಿ ದೇವಿಯಲ್ಲಿ ಪ್ರಾರ್ಥಿಸುತ್ತೇನೆ.
ಇಡೀ ದೇಶ ವರುಣ್ ಸಿಂಗ್ ಕುಟುಂಬದೊಂದಿಗೆ ಇದೆ. ಹೆಲಿಕಾಪ್ಟರ್ ದುರಂತದ ಮೃತಪಟ್ಟ ವೀರ ಯೋಧರ ಕುಟುಂಬದೊಂದಿಗೂ ಇಡೀ ದೇಶ ಇದೆ. ದೇಶವನ್ನು ಮತ್ತಷ್ಟು ಪ್ರಬಲ ಹಾಗೂ ಸೌಹಾರ್ದಯುತ ರಾಷ್ಟ್ರವನ್ನಾಗಿ ಮಾಡಬೇಕಾಗಿದೆ ಎಂದರು.
Doctors are working hard to save the life of Group Captain Varun Singh. I pray to Maa Pateshwari to save his life. The nations stands with his family. The country also stands with the families who lost those brave soldiers: PM Narendra Modi in Balrampur #TamilNaduChopperCrash pic.twitter.com/j78chCjMf2
— ANI UP/Uttarakhand (@ANINewsUP) December 11, 2021