‘ದೇಶದಲ್ಲಿ ಸೋಮವಾರ 19.5 ಲಕ್ಷ ಟನ್ ಕಲ್ಲಿದ್ದಲು ಉತ್ಪಾದನೆಯಾಗಿದೆ. ಇದು ಈವರೆಗಿನ ದಾಖಲೆ. ಕಲ್ಲಿದ್ದಲು ಉತ್ಪಾದನೆಯನ್ನು ಹೆಚ್ಚಿಸುವ ಪ್ರಯತ್ನಗಳನ್ನು ಮುಂದುವರೆಸುತ್ತೇವೆ. ಮುಂಗಾರು ಮುಗಿಯುವ ಹೊತ್ತಿಗೆ ಕಲ್ಲಿದ್ದಲು ಸರಬರಾಜು ಪ್ರಮಾಣ ಹೆಚ್ಚಾಗುವ ಭರವಸೆಯಿದೆ’ ಎಂದು ಜೋಶಿ ಹೇಳಿದರು. ಅಕ್ಟೋಬರ್ 21ರ ನಂತರ 20 ಲಕ್ಷ ಟನ್ಗೆ ಕಲ್ಲಿದ್ದಲು ಉತ್ಪಾದನೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಜೋಶಿ ತಿಳಿಸಿದ್ದರು. ಅಗತ್ಯಕ್ಕೆ ತಕ್ಕಂತೆ ಕಲ್ಲಿದ್ದಲು ಪೂರೈಸಲಾಗುವುದು ಎಂದು ಇಡೀ ದೇಶಕ್ಕೆ ನಾವು ಭರವಸೆ ನೀಡಲು ಇಚ್ಛಿಸುತ್ತೇವೆ ಎಂದು ಸರ್ಕಾರದ ಪರವಾಗಿ ಜೋಶಿ ಭರವಸೆ ನೀಡಿದರು.
ಐದು ರಾಜ್ಯಗಳು ಅನಿಯಮಿತ ಲೋಡ್ ಶೆಡಿಂಗ್ ಸ್ಥಿತಿ ತಲೆದೋರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ ವಿದ್ಯುತ್ ಉತ್ಪಾದನೆ ಸ್ಥಿತಿಗತಿ ಅವಲೋಕಿಸಿದರು. ದೆಹಲಿ, ಪಂಜಾಬ್, ರಾಜಸ್ತಾನ, ಬಿಹಾರ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ವಿದ್ಯುತ್ ಉತ್ಪಾದನಾ ಘಟಕಗಳು ಇಂಧನ ಕೊರತೆ ಎದುರಿಸುತ್ತಿವೆ. ದೇಶದ ಶೇ 70ರಷ್ಟು ವಿದ್ಯುತ್ ಉತ್ಪಾದನೆ ಉಷ್ಣ ವಿದ್ಯುತ್ ಸ್ಥಾವರಗಳಿಂದಲೇ ಆಗುತ್ತಿದೆ.
ಪರಿಸ್ಥಿತಿಯ ಬಗ್ಗೆ ರಾಜ್ಯಗಳು ವ್ಯಕ್ತಪಡಿಸಿರುವ ಆತಂಕವನ್ನು ಕೇಂದ್ರ ಸರ್ಕಾರವು ಈ ಮೊದಲು ತಳ್ಳಿ ಹಾಕಿತ್ತು. ಕೇಂದ್ರ ಇಂಧನ ಸಚಿವ ಆರ್.ಕೆ.ಸಿಂಗ್, ದೇಶದ ವಿದ್ಯುತ್ ಸ್ಥಾವರಗಳಿಗೆ ಅಗತ್ಯ ಪ್ರಮಾಣದ ಕಲ್ಲಿದ್ದಲು ದಾಸ್ತಾನು ಇದೆ ಎಂದು ಹೇಳಿದ್ದರು. ಕೆಲ ಅಧಿಕಾರಿಗಳು ಮತ್ತು ವಿತರಕರಿಂದ ತಪ್ಪು ಸಂದೇಶಗಳು ಹೋಗಿದ್ದ ಹಿನ್ನೆಲೆಯಲ್ಲಿ ಇಂಥ ಪರಿಸ್ಥಿತಿ ತಲೆದೋರಿದೆ ಎಂದು ಹೇಳಿದ್ದರು.
ಕಲ್ಲಿದ್ದಲು ಗಣಿಗಳಿಗೆ ಮಳೆನೀರು ನುಗ್ಗುವ ಕಾರಣ ಮಳೆಗಾಲದಲ್ಲಿ ಕಲ್ಲಿದ್ದಲು ಉತ್ಪಾದನೆ ಸಹಜವಾಗಿಯೇ ಕಡಿಮೆಯಾಗುತ್ತದೆ. ಈ ವರ್ಷ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಲ್ಲಿದ್ದಲು ಧಾರಣೆ ಏರಿಕೆಯಾಗಿರುವ ಕಾರಣ ದೇಶಕ್ಕೆ ಕಲ್ಲಿದ್ದಲು ಬರುವ ಪ್ರಮಾಣವೂ ಕಡಿಮೆಯಾಗಿದೆ. ಈ ಎಲ್ಲದರ ನಡುವೆಯೂ ದೇಶದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿಲ್ಲ. ಯಾವುದೇ ರಾಜ್ಯವು ಬೇಡಿಕೆ ಸಲ್ಲಿಸಿದರೆ ನಾವು ವಿದ್ಯುತ್ ಪೂರೈಸಲು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದ್ದರು.
ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.
ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್ ಸ್ಕಿನ್ ಭಾರತೀಯ ಎಂದು…
ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…
ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…
ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…