ಚಂಡೀಗಢ : ಪಂಜಾಬ್ ಸಿಎಂ ವಿರುದ್ಧ ಹಲವು ಶಾಸಕರು ಹಾಗೂ ಸಚಿವರು ಬಂಡಾಯವೆದ್ದಿದ್ದಾರೆ. ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಪಕ್ಷದಲ್ಲಿ ಈ ಬೆಳವಣಿಗೆ ಆಗಿದ್ದು ಕಾಂಗ್ರೆಸ್ ಗೆ ಆಘಾತ ಉಂಟುಮಾಡಿದೆ.
ನಾಲ್ವರು ಸಚಿವರು- ತ್ರಿಪ್ತ್ ರಾಜಿಂದರ್ ಸಿಂಗ್ ಬಾಜ್ವ, ಸುಖ್ಬಿಂದರ್ ಸಿಂಗ್ ಸರ್ಕಾರಿಯಾ, ಸುಖ್ಜಿಂದರ್ ಸಿಂಗ್ ರಾಂಧವಾ ಹಾಗೂ ಚರಣ್ ಜಿತ್ ಸಿಂಗ್ ಚನ್ನಿ ಹಾಗೂ ಇನ್ನು 24 ಮಂದಿ ಶಾಸಕರು ಸಿಎಂ ಅಮರಿಂದರ್ ಸಿಂಗ್ ವಿರುದ್ಧ ಸಭೆ ನಡೆಸಿದ್ದು ಅಗತ್ಯವಿದ್ದಲ್ಲಿ ಸಿಎಂ ಬದಲಾವಣೆಯ ನಿರ್ಧಾರವನ್ನೂ ಕೈಗೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಒತ್ತಡ ಹೇರುವ ತಂತ್ರದ ಬಗ್ಗೆ ಚರ್ಚಿಸಿದ್ದಾರೆ.