News Karnataka Kannada
Friday, May 03 2024
ದೇಶ

ಡಿ. 13ರಂದು ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಬಳಸಿದ ಶಸ್ತ್ರಾಸ್ತ್ರಗಳ ಪ್ರದರ್ಶನ

Rajnath 31082021
Photo Credit :

ಹೊಸದಿಲ್ಲಿ: ಐವತ್ತು ವರ್ಷಗಳ ಹಿಂದೆ ನಡೆದ ಬಾಂಗ್ಲಾ ವಿಮೋಚನಾ ಯುದ್ಧದ ವೇಳೆ ಈಗಿನ ಪೀಳಿಗೆ ಇರಲಿಲ್ಲ. ಆದರೆ ಆ ಯುದ್ಧದಲ್ಲಿ ಭಾರತ ಬಳಸಿದ ಪ್ರಮುಖ ಶಸ್ತ್ರಾಸ್ತ್ರಗಳು ಮತ್ತು ಉಪಕರಣಗಳು ಹಾಗೂ ಯುದ್ಧದ ಪ್ರಮುಖ ತುಣುಕುಗಳನ್ನು ನೋಡುವ ಅವಕಾಶ.

ಈ ವರ್ಷ 1971ರ ಭಾರತ ಪಾಕಿಸ್ತಾನ ಯುದ್ಧದಲ್ಲಿ ಭಾರತದ ಐತಿಹಾಸಿಕ ವಿಜಯ ಮತ್ತು ಇಂಡೋ-ಬಾಂಗ್ಲಾದೇಶದ ಸ್ನೇಹದ ಸುವರ್ಣ ವರ್ಷ ಆಚರಿಸಲಾಗುತ್ತಿದೆ. ಈ 50 ವರ್ಷಗಳ ಸ್ಮರಣಾರ್ಥವಾಗಿ ಡಿ. 12 ಮತ್ತು 13ರಂದು ಹೊಸದಿಲ್ಲಿಯ ಇಂಡಿಯಾ ಗೇಟ್‌ನಲ್ಲಿ ‘ಸ್ವರ್ಣಿಮ್ ವಿಜಯ್ ಪರ್ವ್’ ಆಯೋಜಿಸಲಾಗಿದೆ.

ಇದರಲ್ಲಿ 1971 ರ ಯುದ್ಧದ ಸಮಯದಲ್ಲಿ ಬಳಸಿದ ಪ್ರಮುಖ ಶಸ್ತ್ರಾಸ್ತ್ರಗಳು ಮತ್ತು ಉಪಕರಣಗಳನ್ನು ಹಾಗೂ ಪ್ರಮುಖ ಯುದ್ಧಗಳ ತುಣುಕುಗಳೊಂದಿಗೆ ಪ್ರದರ್ಶಿಸಲಾಗುತ್ತದೆ.

ಕಾರ್ಯಕ್ರಮವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ. ಉದ್ಘಾಟನೆಯ ನಂತರ ಈ ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿರುತ್ತದೆ.

ಸಮಾರೋಪ ಸಮಾರಂಭವು ಡಿ. 13ರಂದು ನಡೆಯಲಿದೆ. ಇದರಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಜೊತೆಗೆ ಬಾಂಗ್ಲಾದೇಶದಿಂದ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು