ಮುಂಬೈ : ಮುಂಬೈನ್ ಐಷಾರಾಮಿ ಹಡಗಿನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಚಾಲಕನ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ನಲ್ಲಿರುವ ಎನ್ ಸಿಬಿ ಕಚೇರಿಗೆ ತೆರಳಿದ ಶಾರೂಖ್ ಚಾಲಕ ಆಂಟಿ ಡ್ರಗ್ಸ್ ಸಂಸ್ಥೆ ಎದುರು ಹೇಳಿಕೆ ನೀಡಿದ್ದು, ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ.
ರೇವ್ ಪಾರ್ಟಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರದಂದು ರಾತ್ರಿ ಮುಂಬೈ ನ ವಿವಿಧೆಡೆ ಎನ್ ಸಿಬಿ ಸಿಬ್ಬಂದಿಗಳು ದಾಳಿ ನಡೆಸಿ ಡ್ರಗ್ಸ್ ವಶಕ್ಕೆ ಪಡೆದಿದ್ದು, ಸಾಂತಾಕ್ರೂಜ್ನಲ್ಲಿ ಶಿವರಾಜ್ ರಾಮ್ ದಾಸ್ ಎಂಬಾತನನ್ನು ಬಂಧಿಸಿದೆ.
ಈ ಪ್ರಕಣಕ್ಕೆ ಸಂಬಂಧಿಸದಂತೆ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ 19 ಜನರನ್ನು ಎನ್ಸಿಬಿ ಬಂಧಿಸಿದೆ