News Karnataka Kannada
Saturday, May 04 2024
ದೇಶ

ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕೆ ಅಣ್ಣಾಮಲೈ ನೇಮಕ

Annamalai Chennai 8 7 21
Photo Credit :

ಚೆನ್ನೈ, : ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಪೊಲೀಸ್ ಹುದ್ದೆ ತೊರೆದು ರಾಜಕೀಯ ರಂಗ ಪ್ರವೇಶಿಸಿದ್ದು ಗೊತ್ತಿರಬೇಕಲ್ಲ. ಕಳೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಆದರೂ, ಕರ್ನಾಟಕದಲ್ಲಿ ಜನಪ್ರಿಯ ಪೊಲೀಸ್ ಅಧಿಕಾರಿಯಾಗಿದ್ದ ಅಣ್ಣಾಮಲೈಗೆ ಬಿಜೆಪಿ ಮಹತ್ವದ ಹುದ್ದೆ ನೀಡಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ತಮಿಳುನಾಡಿನ ಕರೂರು ಮೂಲದ ಕೆ ಅಣ್ಣಾಮಲೈರನ್ನು ಚುನಾವಣೆಗೂ ಮುನ್ನ ತಮಿಳುನಾಡು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈಗ ಹಾಲಿ ಅಧ್ಯಕ್ಷ ಡಾ ಲೋಗನಾಥನ್ ಮುರಗನ್ ಅವರು ಮೋದಿ ಸಚಿವ ಸಂಪುಟ ಸೇರಿದ್ದರಿಂದ ಅಣ್ಣಾಮಲೈಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ವಾರ್ತಾ ಮತ್ತು ಪ್ರಸಾರ ಖಾತೆಯ ಸಹಾಯಕ ಸಚಿವರಾಗಿ ಡಾ. ಲೋಗನಾಥನ್ ಮುರುಗನ್ ಅವರಿಂದು ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅನುರಾಗ್ ಠಾಕೂರ್ ಅವರ ಸಮಕ್ಷಮದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ಅವರು ತಮ್ಮ ಸಂಪುಟದಲ್ಲಿ ತಮಿಳುನಾಡಿಗೆ ಸಾಕಷ್ಟು ಪ್ರಾತಿನಿಧ್ಯ ನೀಡಿರುವುದಕ್ಕಾಗಿ ಪ್ರಧಾನ ಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಅಣ್ಣಾಮಲೈಗೆ ಅರವಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿತ್ತು. ರಾಜ್ಯದ ಬಿಜೆಪಿ ಉಸ್ತುವಾರಿ ಸಿ. ಟಿ. ರವಿ ಸೇರಿದಂತೆ ಹಲವು ನಾಯಕರು ಅಣ್ಣಾಮಲೈ ಪರವಾಗಿ ಪ್ರಚಾರ ನಡೆಸಿದ್ದರು. ಅಣ್ಣಾಮಲೈ 68 ಸಾವಿರ ಮತಗಳನ್ನು ಪಡೆದು ಸೋಲು ಕಂಡಿದ್ದರು. “ಅರವಕುರುಚಿ ಕ್ಷೇತ್ರದಲ್ಲಿ 68,000 ಮತಗಳನ್ನು ನೀಡಿದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜೆಪಿ ಜೊತೆಗೆ ಎಂದಿಗೂ ಇರುತ್ತೇನೆ” ಎಂದು ಸೋಲಿನ ಬಳಿಕ ಟ್ವೀಟ್‌ನಲ್ಲಿ ಅಣ್ಣಾಮಲೈ ತಿಳಿಸಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ ಅವರು 2019ರ ಮೇ 28ರಂದು ಐಜಿ- ಡಿಜಿಪಿ ಹಿರಿಯ ಅಧಿಕಾರಿಗಳಿಗೆ ರಾಜೀನಾಮೆ ಪತ್ರ ಕಳಿಸಿ ಐಪಿಎಸ್ ಹುದ್ದೆ ತೊರೆದಿದ್ದರು. 2011ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರು ಕಾರ್ಕಳ, ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು