News Karnataka Kannada
Wednesday, May 01 2024
ವಿದೇಶ

ತಾಲಿಬಾನಿಗಳ ಜೊತೆಗೆ ಸಚಿವ ಜೈಶಂಕರ್‌ ಭೇಟಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಸರ್ಕಾರ

Jai Shankar Delhi 29 6 21
Photo Credit :

ನವದೆಹಲಿ: ವಿದೇಶಾಂಗ ಸಚಿವ ಜೈಶಂಕರ್ ಅವರು ಅಫ್ಗಾನಿಸ್ತಾನದ ಕೆಲವು ತಾಲಿಬಾನಿ ನಾಯಕರನ್ನು ಭೇಟಿಯಾಗಿದ್ದಾರೆ ಎಂಬ ವರದಿಗಳು ‘ಸಂಪೂರ್ಣ ಸುಳ್ಳು, ಆಧಾರರಹಿತ ಮತ್ತು ಕುಚೇಷ್ಟೆತನದ್ದು’ ಎಂದು ಸರ್ಕಾರದ ಮೂಲಗಳು ಮಂಗಳವಾರ ತಿಳಿಸಿವೆ.
ಜೈಶಂಕರ್‌ ಅವರು ತಾಲಿಬಾನಿ ನಾಯಕರನ್ನು ಭೇಟಿಯಾಗಿದ್ದಾರೆ ಎಂದೂ, ತಾಲಿಬಾನಿ ಸಂಘಟನೆಯ ಭಾರತದೊಂದಿಗಿನ ಸಂಬಂಧವು ಮುಂದಿನ ದಿನಗಳಲ್ಲಿ ಪಾಕಿಸ್ತಾನದ ದೃಷ್ಟಿಕೋನ ಮತ್ತು ಆಶಯವನ್ನು ಹೊಂದಿರುವುದಿಲ್ಲ ಎಂದೂ ಉಲ್ಲೇಖಿಸಲಾಗಿರುವ ವರದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರದಾಡುತ್ತಿವೆ. ಇದೇ ಹಿನ್ನೆಲೆಯಲ್ಲಿ ಸರ್ಕಾರದ ಮೂಲಗಳು ಸ್ಪಷ್ಟನೆ ನೀಡಿವೆ. ‘ವಿದೇಶಾಂಗ ಸಚಿವ ಜೈಶಂಕರ್‌ ಕೆಲವು ತಾಲಿಬಾನ್ ನಾಯಕರನ್ನು ಭೇಟಿ ಮಾಡಿದ್ದಾರೆ ಎಂಬ ವರದಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಿಸಿದ್ದೇವೆ. ಅಂತಹ ವರದಿಗಳು ಸಂಪೂರ್ಣ ಸುಳ್ಳು, ಆಧಾರರಹಿತ ಮತ್ತು ಕುಚೇಷ್ಟೆಯಾದ್ದಾಗಿವೆ,’ ಎಂದು ಮೂಲವೊಂದು ತಿಳಿಸಿದೆ.
ಯುದ್ಧದಿಂದ ಹಾನಿಗೊಳಗಾದ ಅಫ್ಗಾನಿಸ್ತಾನದಲ್ಲಿ ಸುಮಾರು ಎರಡು ದಶಕಗಳಿಂದ ಬೀಡು ಬಿಟ್ಟದ್ದ ಅಮೆರಿಕ ಸೇನಾ ಪಡೆಗಳು, ದೇಶದಲ್ಲಿ ತಮ್ಮ ಉಪಸ್ಥಿತಿಯನ್ನು ಅಂತ್ಯಗೊಳಿಸುತ್ತಿವೆ. ಸೆಪ್ಟೆಂಬರ್ 11ರ ಒಳಗೆ ಅಫ್ಗಾನಿಸ್ತಾನದಿಂದ ತನ್ನ ಸೇನಾ ಪಡೆಗಳನ್ನು ಹಿಂತೆಗೆದುಕೊಳ್ಳುವುದನ್ನು ಪೂರ್ಣಗೊಳಿಸಲು ಅಮೆರಿಕ ನಿರ್ಧರಿಸಿದೆ. ಇದರ ಹಿನ್ನೆಲೆಯಲ್ಲಿ ಜೈಶಂಕರ್‌ ಅವರ ಕುರಿತ ಸುಳ್ಳು ವರದಿಗಳು ಹೊರಹೊಮ್ಮಿವೆ. ಅಫ್ಗನ್‌ ಶಾಂತಿ ಪ್ರಕ್ರಿಯೆಗೆ ಸಂಬಂಧಿಸಿದ ತ್ವರಿತಗತಿಯ ಬೆಳವಣಿಗೆಗಳ ಮಧ್ಯೆಯೇ ಇತ್ತೀಚೆಗೆ ವಾಷಿಂಗ್ಟನ್ ಡಿಸಿಯಲ್ಲಿ ‘ಅರಬ್ ಸೆಂಟರ್‘ ವೆಬಿನಾರ್‌ ಒಂದನ್ನು ಆಯೋಜಿಸಿತ್ತು. ಇದರಲ್ಲಿ ಭಾಗವಹಿಸಿದ್ದ ಕತಾರಿ ರಾಜತಾಂತ್ರಿಕರೊಬ್ಬರು, ‘ಭವಿಷ್ಯದಲ್ಲಿ ತಾಲಿಬಾನಿ ಗುಂಪುಗಳು ಅಫ್ಗಾನಿಸ್ತಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಭಾರತವು ತಾಲಿಬಾನ್‌ ಜೊತೆಗೆ ಮಾತುಕತೆಯಲ್ಲಿ ತೊಡಗಿದೆ ಎಂದು ಅನಿಸುತ್ತಿದೆ,’ ಎಂದು ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು