ಹರಿಯಾಣ; 20 ವರ್ಷದ ವಿವಾಹಿತ ದಲಿತ ಯುವತಿಯನ್ನು ಅಪಹರಿಸಿ, ಸೆರೆಯಾಳಾಗಿಸಿಕೊಂಡು ಮಂಪರು ಬರುವ ಔಷಧಿಯನ್ನು ನೀಡಿ ಸತತ ಒಂಬತ್ತು ದಿನಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹರಿಯಾಣದ ಗುರುಗಾಂವ್ ನಲ್ಲಿ ನಡೆದಿದೆ. ಈ ಹೇಯ ಘಟನೆಯಲ್ಲಿ ಪೊಲೀಸ್ ಪೇದೆಯೊಬ್ಬನ ಕೈವಾಡವೂ ಇದ್ದು, ಆತನೂ ಸೇರಿದಂತೆ ಒಟ್ಟು ನಾಲ್ಕು ಜನ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದಲ್ಲದೆ, ಅತ್ಯಾಚಾರದ ನಂತರ ವಿವಾಹಿತ ಸಂತ್ರಸ್ತ ಯುವತಿಗೆ ದೂರು ದಾಖಲಿಸಲು ಸಹಾಯ ಮಾಡಿದ್ದಕ್ಕಾಗಿಯೂ ವ್ಯಕ್ತಿಯೊಬ್ಬನ ಮೇಲೆ ಕೆಲವು ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಯುವತಿ ದೂರು ನೀಡಿದ್ದು, ತನ್ನ ದೂರಿನಲ್ಲಿ, “ಅತ್ಯಾಚಾರಿಗಳು ನನ್ನನ್ನು ಅಪಹರಿಸಿ ಮಂಪರು ಬರುವ ಔಷಧಿಗಳನ್ನು ನೀಡುತ್ತಿದ್ದರು, ಹಾಗಾಗಿ ತಾನು ಹೆಚ್ಚಿನ ಸಮಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದೆ. ಈ ಸಂದರ್ಭದಲ್ಲಿ ಸತತ 9 ದಿನ ನನ್ನ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅತ್ಯಾಚಾರ ನಡೆಸಿದವರ ಪೈಕಿ ಪೊಲೀಸ್ ಕಾನ್ಸ್ಟೇಬಲ್ ಸಹ ಓರ್ವ” ಎಂದು ತಿಳಿಸಿದ್ದಾಳೆ.
ಗುರುಗಾಂವ್ ಜಿಲ್ಲೆಯ ಸೊಹ್ನಾ ಬಳಿಯ ತನ್ನ ಹಳ್ಳಿಯವರೇ ಶಂಕಿತ ಆರೋಪಿಗಳು ಎಂದು ಯುವತಿ ಅನುಮಾನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 30 ರಂದು ಯುವತಿಯನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಸೆರೆಯಲ್ಲಿಡ ಲಾಗಿತ್ತು. ಫರಿದಾಬಾದ್ನ ಬಲ್ಲಭ್ಗಢ ಎಂಬಲ್ಲಿ ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಂತರ ಯುವತಿಯನ್ನು ಜುಲೈ 8 ರಂದು ಬಲ್ಲಭ್ಗಢ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿ ದ್ದಾರೆ. ಆಕೆ ತನ್ನ ಕುಟುಂಬವನ್ನು ಸಂಪರ್ಕಿಸಿ ಮನೆಗೆ ತಲುಪಿದ ಬಳಿಕ ಜುಲೈ 10 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಯಾಗಿರುವ ಕಾನ್ಸ್ಟೆಬಲ್ ಫರಿದಾಬಾದ್ನ ಪೊಲೀಸ್ ಠಾಣೆ ಯಲ್ಲಿ ಕರ್ತವ್ಯದಲ್ಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಬುಧವಾರ, ಯುವತಿಗೆ ಹಳ್ಳಿಯ ವ್ಯಕ್ತಿಯೊಬ್ಬರು ಪೊಲೀಸ್ ದೂರು ದಾಖಲಿಸಲು ಸಹಾಯ ಮಾಡಿದ್ದಕ್ಕಾಗಿ ಕೆಲವು ಜನರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ನಡೆಸುತ್ತಿದ್ದ ಖಾಸಗಿ ಶಾಲೆಯ ಆವರಣದಲ್ಲಿ ಕೆಲವರು ಪ್ರವೇಶಿಸಿ ಹಲ್ಲೆ ನಡೆಸಿ ಹಳ್ಳಿಯಲ್ಲಿ ಮೆರವಣಿಗೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…