ಕೋಲ್ಕತ್ತಾ: ಭವಾನಿಪುರ ಉಪಚುನಾವಣೆಯ ಪ್ರಚಾರ ಆರಂಭಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರತಿಯೊಬ್ಬರೂ ತಮಗೆ ನೀಡಬೇಕು. ಇಲ್ಲದಿದ್ದರೆ ತಾವು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ.
“ನನಗೆ ಪ್ರತಿಯೊಂದು ಮತವೂ ಬಹಳ ಮುಖ್ಯ. ಈ ಚುನಾವಣೆಯಲ್ಲಿ ದೀದಿ ಖಂಡಿತವಾಗಿಯೂ ಗೆಲ್ಲುತ್ತಾರೆ ಎಂದು ಭಾವಿಸಿ ನೀವು ನಿಮ್ಮ ಮತವನ್ನು ಚಲಾಯಿಸದಿದ್ದರೆ ಅದು ದೊಡ್ಡ ತಪ್ಪು. ಭಾರೀ ಮಳೆ ಅಥವಾ ಬಿರುಗಾಳಿ ಇದ್ದರೂ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಬೇಡಿ. ನಿಮ್ಮ ಮತವನ್ನು ಚಲಾಯಿಸಿ. ಇಲ್ಲದಿದ್ದರೆ ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.