News Karnataka Kannada
Friday, May 10 2024
ದೇಶ

ದೆಹಲಿಯಲ್ಲಿ ಮಳೆ: ನೀರಿನಲ್ಲಿ ಕುಳಿತು ರಾಕೇಶ್ ಟಿಕಾಯತ್‌ ಧರಣಿ

Rakesh Tikait 12092021
Photo Credit :

ನವದೆಹಲಿ: ದೆಹಲಿಯಲ್ಲಿ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್ ಟಿಕಾಯತ್‌ ಅವರು ಬೆಂಬಲಿಗರೊಂದಿಗೆ ಗಾಜಿಪುರದಲ್ಲಿ ಜಲಾವೃತವಾದ ಫ್ಲೈ ಓವರ್ ಬಳಿ ಮಳೆ ನೀರಿನಲ್ಲಿ ಕುಳಿತು ಧರಣಿ ನಡೆಸಿದ್ದಾರೆ.

ಶನಿವಾರ ಸುರಿದ ಮಳೆಯಿಂದಾಗಿ ದೆಹಲಿ –ಉತ್ತರ ಪ್ರದೇಶ ಗಡಿ ಪ್ರದೇಶದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಟೆಂಟ್‌ಗಳು ಹಾನಿಗೊಳಗಾಗಿವೆ.

ರಾಕೇಶ್ ಟಿಕಾಯತ್‌ ಅವರು ನೀರು ತುಂಬಿರುವ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಮಳೆ ನೀರು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಇದರ ಗಮನ ಹರಿಸುತ್ತಿಲ್ಲ ಎಂದು ಬಿಕೆಯುನ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಆರೋಪಿಸಿದ್ದಾರೆ.

ಈಗ ಪ್ರತಿಭಟಿಸುತ್ತಿರುವ ರೈತರು ಎಲ್ಲಾ ಮೂರು ಋತುಗಳನ್ನು (ಚಳಿಗಾಲ, ಬೇಸಿಗೆ ಮತ್ತು ಮಳೆ) ನೋಡಿದ್ದಾರೆ. ನಾವು ಈಗ ಯಾವುದಕ್ಕೂ ಹೆದರುವುದಿಲ್ಲ ಮಲಿಕ್ ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು