ದೇಶದಲ್ಲಿ ಕಳೆದ 24 ಗಂಟೆಯಲ್ಲಿ 6,915 ಹೊಸ ಕೊವಿಡ್ 19 ಕೇಸ್ ಪತ್ತೆಯಾಗಿದ್ದು, ಮಾರಕ ಕೊರೋನಾಕ್ಕೆ ಕಳೆದ 24 ಗಂಟೆಯಲ್ಲಿ 180 ಜನರು ಬಲಿಯಾಗಿದ್ದಾರೆ. 16,864 ಸೋಂಕಿತರು ಗುಣಮುಖರಾಗಿದ್ದು, ಸದ್ಯ ಭಾರತದಲ್ಲಿ 92,472 ಕೊವಿಡ್ ಸಕ್ರಿಯ ಪ್ರಕರಣಗಳಿವೆ. ಈವರೆಗೆ ದೇಶದಲ್ಲಿ ಒಟ್ಟು 1,77,70,25,914 ಡೋಸ್ ಲಸಿಕೆ ನೀಡಲಾಗಿದೆ. ನಿನ್ನೆಗಿಂತ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ 14 ಪ್ರತಿಶತದಷ್ಟು ಇಳಿಕೆಯಾಗಿದೆ. ಇದೇ ವೇಳೆ ಕೇರಳದಲ್ಲಿ ವಿಧಿಸಲಾಗಿದ್ದ ನಿರ್ಭಂಧಗಳನ್ನು ಸಡಿಲಿಸಲಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದೇ ವೇಳೆ ಕೊರೊನಾ 4 ನೇ ಅಲೆ ಜೂನ್ನಲ್ಲಿ ಅಪ್ಪಳಿಸಲಿದೆ ಎಂದು ಐಐಟಿ ಕಾನ್ಪುರದ ತಜ್ಞರ ತಂಡ ಎಚ್ಚರಿಕೆ ನೀಡಿದೆ. ಜೂನ್ನಲ್ಲಿ ಕೊರೊನಾ ನಾಲ್ಕನೇ ಅಲೆ ಭಾರತದಲ್ಲಿ ಉತ್ತುಂಗಕ್ಕೆ ಹೋಗಲಿದೆ. 4ನೇ ಅಲೆಯ ತೀವ್ರತೆಯು ಹೊಸ ರೂಪಾಂತರಗಳ ಹೊರಹೊಮ್ಮುವಿಕೆ, ವ್ಯಾಕ್ಸಿನೇಷನ್ ಸ್ಥಿತಿ ಮತ್ತು ಬೂಸ್ಟರ್ ಡೋಸ್ಗಳ ಮೇಲೆ ಅವಲಂಬಿತವಾಗಿರುತ್ತದೆ.