ಪಾಕಿಸ್ತಾನದಲ್ಲಿ ತರಬೇತಿ ಪಡೆದ ಇಬ್ಬರು ವ್ಯಕ್ತಿಗಳು ಸೇರಿದಂತೆ ಆರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ಹೇಳಿದ್ದಾರೆ. ಈ ಉಗ್ರರು ಉದ್ದೇಶಿತ ವ್ಯಕ್ತಿಗಳ ಹತ್ಯೆ ಹಾಗು ದೇಶದ ವಿವಿಧೆಡೆ ಬಾಂಬ್ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದರು ಎಂಬ ಆಘಾತಕಾರಿ ಸಂಗತಿ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಈ ಕುರಿತ ಮಾಹಿತಿ ನೀಡಿದ ದೆಹಲಿ ವಿಶೇಷ ಪೊಲೀಸ್ ವಿಭಾಗದ ವಿಶೇಷ ಆಯುಕ್ತ ಪ್ರಮೋದ್ ಕುಶ್ವಾಹ, ಬಂಧಿತರು ದೇಶಾದ್ಯಂತ ಉದ್ದೇಶಿತ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಲು ಯೋಜಿಸುತ್ತಿದ್ದರು. ಬಂಧಿತರಿಂದ ಸ್ಫೋಟಕಗಳು ಮತ್ತು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೋಟಾದಲ್ಲಿ ಸಮೀರ್ ಎಂಬ ಓರ್ವನನ್ನು, ದೆಹಲಿಯಿಂದ ಇಬ್ಬರು ವ್ಯಕ್ತಿಗಳು ಮತ್ತು ಉತ್ತರ ಪ್ರದೇಶದಿಂದ ಮೂವರನ್ನು ಬಂಧಿಸಲಾಗಿದೆ. 6 ಜನರಲ್ಲಿ, ಇಬ್ಬರನ್ನು ಮಸ್ಕತ್ ಮೂಲಕ ಪಾಕಿಸ್ತಾನಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರಿಗೆ ಸ್ಫೋಟಕಗಳು ಮತ್ತು ಬಂದೂಕುಗಳನ್ನು ಬಳಸುವ ಕುರಿತು 15 ದಿನಗಳ ಕಾಲ ತರಬೇತಿ ನೀಡಲಾಗಿದೆ ಎಂದು ತಿಳಿಸಿದೆ.
ಬಂಧಿತರು ತಮ್ಮ ಗುಂಪಿನಲ್ಲಿ 14-15 ಬಾಂಗ್ಲಾ ಮಾತನಾಡುವ ವ್ಯಕ್ತಿಗಳು ಸಹ ತರಬೇತಿ ಪಡೆದಿರಬಹುದು ಎಂದು ಬಂಧಿತರು ಹೇಳಿದ್ದಾರೆ ಎಂದು ದೆಹಲಿ ಪೊಲೀಸ್ ವಿಶೇಷ ವಿಭಾಗ ಹೇಳಿದೆ. ಅವರು 2 ತಂಡಗಳನ್ನು ರಚಿಸಿದ್ದರು. ಒಂದನ್ನು ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಸಂಘಟಿಸಿದ್ದಾನೆ. ಗಡಿಯಾಚೆಯಿಂದ ಶಸ್ತ್ರಾಸ್ತ್ರಗಳನ್ನು ತಂದು, ಅವುಗಳನ್ನು ಭಾರತದಲ್ಲಿ ಅಡಗಿಸಿಡಲಾಗುತ್ತಿತ್ತು. ಇವರಿಗೆ ಹವಾಲಾ ಮೂಲಕ ಧನಸಹಾಯ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…
ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 4…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…