News Karnataka Kannada
Thursday, May 02 2024
ದೇಶ

ನಮೋ ವಿರುದ್ಧ ಕಿಡಿ ಕಾರಿದ ಕೇಜ್ರಿವಾಲ್

Delhi Kejriwal Dt 17 6 21 No176213 Newsk 8782062721
Photo Credit :

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ರೈತರ ಮೇಲೆ ಅಷ್ಟೋಂದು ದ್ವೇಷ ಯಾಕೆ ಎಂದು ದೆಹಲಿ ಮುಖ್ಯಮಂತ್ರಿ, ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಬುಧವಾರ ಪ್ರಶ್ನೆ ಮಾಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಜ್ರಿವಾಲ್ ಅವರು, ಲಖೀಂಪುರದಲ್ಲಿ ನಡೆದ ರೈತರ ಹತ್ಯೆಯನ್ನು ತೀವ್ರವಾಗಿ ಖಂಡಿಸಿ, ರೈತರ ಹತ್ಯೆಯ ಆರೋಪಿಗಳನ್ನು ತಕ್ಷಣ ಬಂಧಿಸಲು ಆಗ್ರಹಿಸಿದರು.

ಘಟನೆಯ ಆರೋಪಿಯನ್ನು ಬಂಧಿಸುವಲ್ಲಿ ಸರಕಾರ ಮನಸ್ಸು ಮಾಡುತ್ತಿಲ್ಲ, ಹಿಂಸಾಚಾರದಲ್ಲಿ ಕೇಂದ್ರ ಸಚಿವರ ಪುತ್ರ ಭಾಗಿಯಾಗಿರುವ ಆರೋಪವಿದೆ, ತಕ್ಷಣ ಪ್ರಧಾನಿ ಮೋದಿ ಅವರು ಆಪಾದಿತ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಕಳೆದೊಂದು ವರ್ಷದಿಂದ ರೈತರು ಧರಣಿ ನಡೆಸುತ್ತಿದ್ದಾರೆ. 600 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಹೋರಾಟ ನಿರತ ರೈತರನ್ನು ವಾಹನ ಹರಿಸಿ ಚಕ್ರದ ಅಡಿಯಲ್ಲಿ ಕೊಲ್ಲಲಾಗಿದೆ. ಪ್ರಧಾನಿ ಮೋದಿ ಅವರಿಗೆ ರೈತರ ಮೇಲೆ ಇಷ್ಟೊಂದು ದ್ವೇಷ ಯಾಕೆ ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು