ನ. 29ರಂದು ನಡೆಸಲು ಉದ್ದೇಶಿಸಿರುವ ಟ್ರಾಕ್ಟರ್ ರ್ಯಾಲಿ ರದ್ದುಪಡಿಸಲು ತೀರ್ಮಾನಿಸಲಾಗಿದೆ ಎಂದು ಕಿಸಾನ್ ಯೂನಿಯನ್ ಮುಖಂಡ ದರ್ಶನ್ ಪಾಲ್ ಸಿಂಗ್ ಹೇಳಿಕೆ ನೀಡಿದ್ದಾರೆ.
ನವೆಂಬರ್ 29ರಂದು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರಾಲಿ ಸ್ಥಗಿತಗೊಳಿಸಲಾಗಿದೆ. ಆದರೆ ಇದು ಕೇವಲ ಸ್ಥಗಿತವಷ್ಟೇ, ಟ್ರ್ಯಾಕ್ಟರ್ ರ್ಯಾಲಿಯನ್ನು ನಿಜವಾಗಿ ಹಿಂಪಡೆದಿಲ್ಲ, ಡಿಸೆಂಬರ್ 4 ರಂದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಡೆಸುತ್ತೇವೆ ಹೇಳಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಸಂಘ, ರೈತರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು. ಎಂಎಸ್ಪಿ ಸಂಬಂಧ ಸಮಿತಿಯನ್ನು ರಚಿಸಬೇಕು ಎಂದು ಹೇಳಿದೆ. ಈ ಪತ್ರಕ್ಕೆ ಉತ್ತರಿಸಲು ಡಿಸೆಂಬರ್ 4ರವರೆಗೆ ಪ್ರಧಾನಿಗೆ ಅವಕಾಶ ನೀಡಿದ್ದೇವೆ. ಒಂದು ವೇಳೆ ಅಲ್ಲಿಯವರೆಗೆ ಉತ್ತರ ಬರದಿದ್ದರೆ ಹೋರಾಟ ಮುಂದುವರೆಯಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.