Categories: ದೇಶ

ಪದ್ಮಶ್ರೀ ಪುರಸ್ಕೃತ ನಂದಾ ಸರ್​​​ ಖ್ಯಾತಿಯ ನಂದಕಿಶೋರ್ ಪ್ರಸ್ಟಿ ವಿಧಿವಶ

ಕೊರೋನಾ ಸೋಂಕಿಗೆ ಒಳಗಾಗಿ ನವೆಂಬರ್​​​ 30ರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 104 ವರ್ಷದ ಪದ್ಮಶ್ರೀ ಪುರಸ್ಕೃತ ನಂದಾ ಸರ್​​​ ಖ್ಯಾತಿಯ ನಂದಕಿಶೋರ್ ಪ್ರಸ್ಟಿ ವಿಧಿವಶರಾಗಿದ್ದಾರೆ.

2020ನೇ ಸಾಲಿನಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ಇವರು, ತಮ್ಮ ಊರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಂದಾ ಮಾಸ್ಟರ್ ಚತ್ಸಾಲಿ ಎಂದೇ ಚಿರಪರಿಚಿತರಾಗಿದ್ದರು.

ಕಳೆದ 75 ವರ್ಷಗಳಿಂದ ತಮ್ಮ ಗ್ರಾಮದ ಮಕ್ಕಳಿಗೆ ಹಾಗೂ ಹಿರಿಯ ನಾಗರಿಕರಿಗೆ ಉಚಿತವಾಗಿ ಪಾಠ ಮಾಡುವ ಮೂಲಕ ಗ್ರಾಮದಲ್ಲಿ ಅನಕ್ಷರತೆಯನ್ನು ನಿರ್ಮೂಲನೆ ಮಾಡುವ ಉದ್ದೇಶವನ್ನಿಟ್ಟುಕೊಂಡಿದ್ದ ಇವರು, 100ರ ಹರೆಯದಲ್ಲೂ ಮರದ ಕೆಳಗೆ ಕುಳಿತು ಮಕ್ಕಳಿಗೆ ಪಾಠ ಹೇಳುವ ಕಾರ್ಯ ಮುಂದುವರೆಸಿದ್ದರು.

ಒಡಿಶಾದ ಜೈಪುರ ಜಿಲ್ಲೆಯ ಕಂಠೀರ ಗ್ರಾಮದಲ್ಲಿ ನಂದಾ ಮಾಸ್ಟರ್​​ ಮಕ್ಕಳಿಗೆ ಹಾಗೂ ಹಿರಿಯ ಅನಕ್ಷರಸ್ಥ ನಾಗರಿಕರಿಗೆ ಅಕ್ಷರ ಹೇಳಿಕೊಡುವ ತಮ್ಮ ಚತ್ಸಾಲಿ ಸಂಪ್ರದಾಯವನ್ನು ಮುಂದುವರಿಸಿದ್ದರು. ಸುಮಾರು 7 ದಶಕಗಳಿಂದ ಗ್ರಾಮದ ಹನುಮಾನ್​​ ದೇವಸ್ಥಾನದ ಬಳಿ ಇರುವ ಮರದ ಕೆಳಗೆ ಈ ಚತ್ಸಾಲಿ ನಡೆಯುತ್ತಿತ್ತು.

ತಮ್ಮ ಚತ್ಸಾಲಿ ಮೂಲಕ 3,000 ಸಾವಿರಕ್ಕೂ ಅಧಿಕ ಮಕ್ಕಳ ಭವಿಷ್ಯ ರೂಪಿಸಿದ್ದಾರೆ. ಅವರು ನಿಸ್ವಾರ್ಥ ಸೇವೆಗಾಗಿ ಭಾರತದ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀಯನ್ನು ಮುಡಿಗೇರಿಸಿಕೊಂಡಿದ್ದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

50 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

1 hour ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago