ನವದೆಹಲಿ, ಹೈದರಾಬಾದ್ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿದ್ದ ಆರೋಪಿಗಳ ಎನ್ಕೌಂಟರ್ ಪ್ರಕರಣದ ತನಿಖೆ ಪೂರ್ಣಗೊಳಿಸಲು ನ್ಯಾಯಾಂಗ ಸಮಿತಿಗೆ ಸುಪ್ರೀಂಕೋರ್ಟ್ ಇನ್ನೂ ಆರು ತಿಂಗಳ ಕಾಲಾವಕಾಶ ನೀಡಿದೆ. 27 ವರ್ಷದ ಪಶು ವೈದ್ಯೆ 2019ರ ನವೆಂಬರ್ 27ರಂದು ಸಂಜೆ ಹೈದರಾಬಾದ್ನ ರಾಷ್ಟ್ರೀಯ ಹೆದ್ದಾರಿ 44ರ ಟೋಲ್ ಬಳಿ ಸ್ಕೂಟರ್ ನಿಲ್ಲಿಸಿ ಹೋಗಿದ್ದರು.
ಆದರೆ ದುಷ್ಕರ್ಮಿಗಳು ಅತ್ಯಾಚಾರ ಮಾಡುವ ಉದ್ದೇಶದಿಂದಲೇ ಆಕೆಯ ಸ್ಕೂಟರ್ ನ್ನು ಪಂಚರ್ ಮಾಡಿ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಬಂದು ದುಷ್ಕರ್ಮಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆಗೈದು, ಸುಟ್ಟು ಹಾಕಿದ್ದರು. ಈ ಘಟನೆ ದೇಶಾದ್ಯಂತ ಕಿಚ್ಚು ಹಚ್ಚಿತ್ತು. ಘಟನೆಯ ಬೆನ್ನಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಸ್ಥಳ ಮಹಜರು ನಡೆಸಲು ಕರೆದೊಯ್ದಿದ್ದ ವೇಳೆ ಎನ್ಕೌಂಟರ್ ನಡೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದರು. ಒಂದು ವಾರದ ಒಳಗೆ ನಡೆದ ಈ ಎನ್ಕೌಂಟರ್ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿ.ಎಸ್.ಶ್ರೀಪ್ರುಕರ್ ಅವರ ನೇತೃತ್ವದಲ್ಲಿ ಮೂವರ ಸಮಿತಿಯನ್ನು ಡಿಸೆಂಬರ್ 12ರಂದು ರಚಿಸಲಾಗಿದೆ. ಆರು ತಿಂಗಳ ಒಳಗೆ ವರದಿ ನೀಡಬೇಕಿದ್ದ ಸಮಿತಿಗೆ ಈವರೆಗೂ ಮೂರು ಬಾರಿ ಕಾಲಾವಕಾಶ ವಿಸ್ತರಣೆ ಮಾಡಲಾಗಿದೆ.
ಇಂದು ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ಸೂರ್ಯಕಾಂತ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಹಾಜರಾದ ವಿಚಾರಣಾ ಸಮಿತಿಯ ಪರ ವಕೀಲರು ಮತ್ತಷ್ಟು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಉತ್ತರ ಪ್ರದೇಶದ ರೌಡಿ ವಿಕಾಶ್ ದುಬೆ ಅವರ ಎನ್ಕೌಂಟರ್ ಪ್ರಕರಣದ ತನಿಖೆಗೆ ರಚಿಸಲಾಗಿದ್ದ ಸಮಿತಿ ವಿಚಾರಣೆ ನಡೆಸಿ ಈಗಾಗಲೇ ವರದಿ ಸಲ್ಲಿಸಿದೆ. ನಿಮ್ಮ ಸಮಿತಿಗೆ ಇನ್ನೂ ಎಷ್ಟು ಕಾಲಾವಕಾಶ ಬೇಕು ಎಂದು ನ್ಯಾಯಮೂರ್ತಿಗಳು ಕೇಳಿದರು. ವಕೀಲರ ಮನವಿಯ ಪ್ರಕಾರ ಆರು ತಿಂಗಳ ಕಾಲಾವಕಾಶವನ್ನು ಮತ್ತೆ ವಿಸ್ತರಣೆ ಮಾಡಿದರು.
ಪಶುವೈದ್ಯೆ ಹತ್ಯಾಚಾರ ಆರೋಪಿಗಳ ಎನ್ ಕೌಂಟರ್ , : ತನಿಖೆಗೆ ಸುಪ್ರೀಂ ಕಾಲಾವಕಾಶ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.