News Karnataka Kannada
Thursday, May 02 2024
ದೇಶ

ಪೆಗಸಿಸ್ ಹಗರಣ ; ಅರ್ಜಿಗಳಿಗೆ ಉತ್ತರ ನೀಡಲು ಕೇ0ದ್ರಕ್ಕೆ ಇನ್ನಷ್ಟು ಕಾಲಾವಕಾಶ ನೀಡಿದ ಸುಪ್ರೀಂ

Supreme Court 30 6 21
Photo Credit :
ನವದೆಹಲಿ: ಸ್ವತಂತ್ರವಾಗಿ ತನಿಖೆ ನಡೆಸಲು ಒತ್ತಾಯಿಸಿ ಸಲ್ಲಿಸಿದ್ದ ಪೆಗಾಸಸ್ ಗೂಢಚರ್ಯೆ ಪ್ರಕರಣದ  ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಇನ್ನಷ್ಟು ಕಾಲಾವಕಾಶ ನೀಡಿದೆ.
ಸ್ವತಂತ್ರ ತನಿಖೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ವಿವಿಧ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ತ್ರಿಸದಸ್ಯ ನ್ಯಾಯಮೂರ್ತಿ ಪೀಠ ಆಗಸ್ಟ್‌ 17ರಂದು ಕೇಂದ್ರಕ್ಕೆ ನೋಟಿಸ್‌ ನೀಡಿತ್ತು.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ಪೀಠ ಈ ಅರ್ಜಿಗಳ ವಿಚಾರಣೆ ನಡೆಸಿತು. ಈ ವೇಳೆ ಕೇಂದ್ರದ ಪರ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಕೆಲವು ತೊಂದರೆಗಳಿಂದಾಗಿ ನ್ಯಾಯಪೀಠ ಕೇಳಿರುವ ಪ್ರಮಾಣ ಪತ್ರವನ್ನು ಸಲ್ಲಿಸಲಾಗಿಲ್ಲ. ಹಾಗಾಗಿ ಈ ಪ್ರಕರಣದ ವಿಚಾರಣೆಯನ್ನು ಗುರುವಾರ ಅಥವಾ ಸೋಮವಾರ ನಡೆಯುವ ವಿಚಾರಣೆ ಪಟ್ಟಿಯಲ್ಲಿ ಸೇರಿಸಲು ಮನವಿ ಮಾಡಿದರು.
ಇನ್ನು ಪತ್ರಕರ್ತ ಎನ್‌. ರಾಮ್‌ ಪರ ಹಾಜರಾಗಿದ್ದ ವಕೀಲ ಕಪಿಲ್ ಸಿಬಲ್ ಅವರು ‘ಕೇಂದ್ರದ ಮನವಿಗೆ ಯಾವುದೇ ಆಕ್ಷೇಪಣೆಗಳಿಲ್ಲ‘ ಎಂದು ಹೇಳಿದರು. ಹೀಗಾಗಿ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್‌ 13ಕ್ಕೆ ಮುಂದೂಡಿದೆ. ಅಲ್ಲದೆ  ಪ್ರಕರಣವನ್ನು ಸೋಮವಾರ ವಿಚಾರಣೆ ನಡೆಸುವ ವಿಷಯಗಳ ಪಟ್ಟಿಗೆ ಸೇರಿಸಲು ಸೂಚಿಸಿದೆ.
ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಈ ಪೆಗಾಸಸ್ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಭಾರತದ ಎಡಿಟರ್ಸ್ ಗಿಲ್ಡ್ ಸಲ್ಲಿಸಿರುವ ಅರ್ಜಿ ಸೇರಿದಂತೆ ನ್ಯಾಯಾಲಯವು ಸುಮಾರು 12 ಅರ್ಜಿಗಳ ವಿಚಾರಣೆ ನಡೆಸುತ್ತಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು