News Karnataka Kannada
Thursday, May 02 2024
ದೇಶ

ಪೆಗಾಸಸ್ ತನಿಖೆಗೆ ಆಯೋಗ ರಚಿಸಲು ಕೇಂದ್ರಕ್ಕೆ 10 ದಿನ ಗಡುವು ನೀಡಿದ ಸುಪ್ರೀಂ

Supreme Court 30 6 21
Photo Credit :

ನವದೆಹಲಿ, ; ಪೆಗಾಸಸ್ ಬೇಹುಗಾರಿಕೆಯ ಆರೋಪವನ್ನು ಸುಪ್ರೀಂಕೋರ್ಟ್ ಮುಂದೆ ನಿರಾಕರಿಸಿರುವ ಕೇಂದ್ರ ಸರ್ಕಾರ, ಆದಾಗ್ಯೂ ಪರಿಶೀಲನೆಗಾಗಿ ತಜ್ಞರ ಸಮಿತಿ ರಚನೆ ಮಾಡುವುದಾಗಿ ಹೇಳಿದೆ. ತನಿಖಾ ಆಯೋಗ ರಚನೆಗೆ ನ್ಯಾಯಾಲಯ ಸರ್ಕಾರಕ್ಕೆ 10 ದಿನಗಳ ಕಾಲಾವಕಾಶ ನೀಡಿದೆ. ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸುಪ್ರೀಂಕೋರ್ಟ್‍ಗೆ ನಾಲ್ಕು ಪುಟಗಳ ಪ್ರಮಾಣ ಪತ್ರ ಸಲ್ಲಿಸಿದ್ದು, ತಾಂತ್ರಿಕವಾಗಿ ಹಾಗೂ ನಿಸ್ಸಂದಿಗ್ಧವಾಗಿ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದೆ.
ಆದಾಗ್ಯೂ ಪಟ್ಟಭದ್ರ ಹಿತಾಸಕ್ತಿಗಾಗಿ ಏನಾದರೂ ಲೋಪಗಳು ನಡೆದಿವೆಯೇ ಎಂಬುದನ್ನು ಪರಿಶೀಲನೆ ನಡೆಸಲು ಕ್ಷೇತ್ರ ಪರಿಣಿತರ ಸಮಿತಿಯೊಂದನ್ನು ರಚನೆ ಮಾಡಲಾಗುವುದು ಎಂದು ಪ್ರಮಾಣ ಪತ್ರದಲ್ಲಿ ಹೇಳಿದೆ. ಇಸ್ರೇಲ್‍ನ ಖಾಸಗಿ ಸಂಸ್ಥೆ ರೂಪಿಸಿರುವ ಪೆಗಾಸಸ್ ಸಾಫ್ಟವೇರ್ ಬಳಕೆ ಮಾಡಿಕೊಂಡು ದೇಶದ ನ್ಯಾಯಮೂರ್ತಿಗಳು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಮತ್ತು ರಾಜಕೀಯ ನಾಯಕರ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಈ ವಿಷಯವನ್ನೇ ಪ್ರಧಾನವಾಗಿಟ್ಟುಕೊಂಡು ಲೋಕಸಭೆಯಲ್ಲಿ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದು, ಮುಂಗಾರು ಅಧಿವೇಶನ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು. ಪೆಗಾಸಸ್‍ನಲ್ಲಿ ಯಾವುದೇ ಲೋಪಗಳಾಗಿಲ್ಲ ಎಂದು ರೈಲ್ವೆ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಯಲ್ಲಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು