News Karnataka Kannada
Sunday, April 28 2024
ದೇಶ

ಪೆಗಾಸಿಸ್ ಪ್ರಕರಣ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದ ಸುಪ್ರೀಂ

Supreem Mai Newsk 3834246588
Photo Credit :

ನವದೆಹಲಿ: ದೇಶದಲ್ಲಿ ಬಹಳ ಸದ್ದು ಮಾಡುತ್ತಿರುವ ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಸಂಬOಧ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, 10 ದಿನಗಳೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ.

ವಿಚಾರಣೆ ವೇಳೆ ನ್ಯಾಯಪೀಠ, ನ್ಯಾಯಾಲಯದಿಂದ ಮುಚ್ಚಿಡಲು ಏನೂ ಇಲ್ಲ. ಇಸ್ರೇಲಿ ಸ್ಪೆöವೇರ್ ಅನ್ನು ಪ್ರತ್ಯೇಕ ಫೋನ್ ಗಳಲ್ಲಿ ಬಳಸಲಾಗಿದೆ ಎಂಬ ಆರೋಪಗಳಿಗೆ ಸರ್ಕಾರ ಉತ್ತರಿಸಬೇಕು ಎಂದು ಹೇಳಿದೆ. ಕೇಂದ್ರದ ಪ್ರತಿಕ್ರಿಯೆಯನ್ನು ಪಡೆದ ನಂತರವೇ ಆರೋಪಗಳ ತನಿಖೆಗೆ ಸಮಿತಿಯನ್ನು ರಚಿಸುವುದನ್ನು ನಿರ್ಧರಿಸಲಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

“ರಾಷ್ಟಿçಯ ಭದ್ರತೆಗೆ ರಾಜಿಯಾಗುವುದನ್ನು ನಾವು ಬಯಸುವುದಿಲ್ಲ, ಆದರೆ ಅವರ ಆರೋಪದ ಪ್ರಕಾರ ವ್ಯಕ್ತಿಗಳ ಫೋನ್‌ಗಳ ಮೇಲೆ ದಾಳಿ ಮಾಡಲಾಗಿದೆ. ಸಮರ್ಥ ಪ್ರಾಧಿಕಾರ ಮಾತ್ರ ಅದಕ್ಕೆ ಪ್ರತಿಕ್ರಿಯಿಸಬಹುದು” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು