ನವದೆಹಲಿ: ದೇಶದಲ್ಲಿ ಬಹಳ ಸದ್ದು ಮಾಡುತ್ತಿರುವ ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಸಂಬOಧ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, 10 ದಿನಗಳೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ.
ವಿಚಾರಣೆ ವೇಳೆ ನ್ಯಾಯಪೀಠ, ನ್ಯಾಯಾಲಯದಿಂದ ಮುಚ್ಚಿಡಲು ಏನೂ ಇಲ್ಲ. ಇಸ್ರೇಲಿ ಸ್ಪೆöವೇರ್ ಅನ್ನು ಪ್ರತ್ಯೇಕ ಫೋನ್ ಗಳಲ್ಲಿ ಬಳಸಲಾಗಿದೆ ಎಂಬ ಆರೋಪಗಳಿಗೆ ಸರ್ಕಾರ ಉತ್ತರಿಸಬೇಕು ಎಂದು ಹೇಳಿದೆ. ಕೇಂದ್ರದ ಪ್ರತಿಕ್ರಿಯೆಯನ್ನು ಪಡೆದ ನಂತರವೇ ಆರೋಪಗಳ ತನಿಖೆಗೆ ಸಮಿತಿಯನ್ನು ರಚಿಸುವುದನ್ನು ನಿರ್ಧರಿಸಲಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.
“ರಾಷ್ಟಿçಯ ಭದ್ರತೆಗೆ ರಾಜಿಯಾಗುವುದನ್ನು ನಾವು ಬಯಸುವುದಿಲ್ಲ, ಆದರೆ ಅವರ ಆರೋಪದ ಪ್ರಕಾರ ವ್ಯಕ್ತಿಗಳ ಫೋನ್ಗಳ ಮೇಲೆ ದಾಳಿ ಮಾಡಲಾಗಿದೆ. ಸಮರ್ಥ ಪ್ರಾಧಿಕಾರ ಮಾತ್ರ ಅದಕ್ಕೆ ಪ್ರತಿಕ್ರಿಯಿಸಬಹುದು” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.