ವದೆಹಲಿ : ಕೊರೋನಾ ಲಸಿಕೆಗಳು ಲಭ್ಯವಿದ್ದರೂ ಸಹ ಪ್ರತಿಪಕ್ಷಗಳು ಬೇಕಂತಲೇ ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸುತಿದ್ದು ಇದು ಈ ದೇಶದ ದುರಂತ ಹಾಗೂ “ಅತ್ಯಂತ ದುರದೃಷ್ಟಕರ” ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ವಿರುದ್ದ ಮಂಗಳವಾರ ಕಟುವಾಗಿ ಟೀಕಿಸಿದರು.
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡುತಿದ್ದ ಅವರು ಲಸಿಕೆಗಳ ಕೊರತೆಯ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ, ಏಕೆಂದರೆ ಲಭ್ಯತೆಯನ್ನು ಎಲ್ಲಾ ಕಡೆ ದೊರಕುವಂತೆ ಮಾಡಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಲಸಿಕೆ ವ್ಯರ್ಥವಾಗುವುದನ್ನು ತಡೆಯಲು ಪ್ರತಿಪಕ್ಷಗಳು ಸೇರಿದಂತೆ ಎಲ್ಲಾ ಕಡೆಯಿಂದ ಏಕೀಕೃತ ಪ್ರಯತ್ನಗಳು ನಡೆಯಬೇಕು ಎಂದು ಅವರು ಹೇಳಿದರು ಮತ್ತು ಲಸಿಕೆ ತೆಗೆದುಕೊಳ್ಳಲು ಜನರು ಹಿಂಜರಿಯುತ್ತಿದ್ದು ಅದನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಹಾಗೂ ಜನರನ್ನು ತಲುಪಲು ಉಪಾಯಗಳನ್ನು ಸರ್ಕಾರಕ್ಕೆ ತಿಳಿಸಬೇಕು ಎಂದು ತಮ್ಮ ಪಕ್ಷದ ಸಹೋದ್ಯೋಗಿಗಳನ್ನು ಕೇಳಿದರು. ಇದೇ ವೇಳೆ ದೆಹಲಿಯ ಆಮ್ ಆದ್ಮಿ ಸರ್ಕಾರದ ನಡೆಯನ್ನು ವಿರೋಧಿಸಿದ ಪಿಎಂ ಮೋದಿ ಇದು “ಅತ್ಯಂತ ದುರದೃಷ್ಟಕರ” ಮತ್ತು “ಇದು ಜನರ ಮೇಲಿನ ತಮ್ಮ ಕಾಳಜಿಯನ್ನು ತೋರಿಸುತ್ತದೆ” ಎಂದು ಹೇಳಿದರು, ಏಕೆಂದರೆ ಸುಮಾರು ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ 20% ಕಾರ್ಮಿಕರಿಗೆ ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರ ಲಸಿಕೆ ನೀಡಿಲ್ಲ. ಕಾಂಗ್ರೆಸ್ ಪಕ್ಷದ ವಿಚಾರ ತೆಗೆದುಕೊಂಡು ಪ್ರಧಾನಿ, ದೇಶದ ಕೇವಲ ಎರಡು ಅಥವಾ ಮೂರು ರಾಜ್ಯಗಳಿಗೆ ಮಾತ್ರ ಸೀಮಿತವಾಗಿರುವ ಪಕ್ಷವು ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸುತ್ತಿದೆ. ಎರಡನೇ ಅವಧಿಯಲ್ಲಿ ದಾಖಲೆಯ ಅಂತರದೊಂದಿಗೆ ಬಿಜೆಪಿಯನ್ನು ದೇಶದ ಜನರು ಆಯ್ಕೆ ಮಾಡಿರುವುದನ್ನು ಅವರ ಕೈಯಲ್ಲಿ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಆದ ಕಾರಣ ಈ ರೀತಿ ಕಾಲೆಳೆಯುವ ತಂತ್ರ ಮಾಡುತ್ತಿದೆ ಎಂದರು.
ಇತಿಹಾಸದಲ್ಲೇ ಕೇಸರಿ ಪಕ್ಷವು ಬಹಳ ಕಷ್ಟ ಪಟ್ಟು ಈ ಮಟ್ಟಕ್ಕೆ ಬಂದಿದೆ, ಅಲ್ಲದೇ ಅತ್ಯಂತ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಮ್ಮನ್ನು ಪ್ರತಿಪಕ್ಷಗಳು ಸಹಿಸುತ್ತಿಲ್ಲ ಆದ ಕಾರಣ. ತಮ್ಮ ಪಕ್ಷದ ಸದಸ್ಯರು ಸಕ್ರಿಯವಾಗಿ ಮತ್ತು ಸಂಸತ್ತಿನಲ್ಲಿ ಹಾಜರಿರಬೇಕು ಮತ್ತು ಶಾಸನಗಳನ್ನು ನಿರ್ಬಂಧಿಸಲು ವಿರೋಧ ಪಕ್ಷಗಳು ಮಾಡುವ ಯಾವುದೇ ಪ್ರಯತ್ನವನ್ನು ತಡೆಯುವ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಆಗ್ರಹಿಸಿದರು.
ಪ್ರತಿಪಕ್ಷಗಳಿಂದ ಕೊರೋನ ರಾಜಕೀಯ ; ಮೋದಿ ಟೀಕೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.