Categories: ದೇಶ

ಬಾಂಗ್ಲಾದೇಶದ ವಿಮಾನ ಹಾರುತ್ತಿದ್ದಾಗಲೇ ವಿಮಾನ ಚಾಲಕನಿಗೆ ಹೃದಯಾಘಾತ

ನಾಗ್ಪುರ: ಧಾಕಾದಿಂದ ಮಸ್ಕಟ್ ಗೆ ತೆರಳುತ್ತಿದ್ದ ಬಾಂಗ್ಲಾದೇಶದ ಬಿಮಾನ್ ಸಂಸ್ಥೆಯ ವಿಮಾನ ಆಕಾಶದಲ್ಲಿ ಹಾರುತ್ತಿದ್ದಾಗಲೇ ವಿಮಾನ ಚಾಲಕ ಹೃದಯಾಘಾತಕ್ಕೀಡಾದ ಘಟನೆ ನಡೆದಿದೆ.

ಬೋಯಿಂಗ್ ವಿಮಾನದಲ್ಲಿ ಈ ಸಂದರ್ಭ 126 ಮಂದಿ ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಲಕ ಹೃದಯಾಘಾತಕ್ಕೀಡಾದಾಗ ವಿಮಾನ ಭಾರತದ ಮೇಲೆ ಹಾರುತ್ತಿತ್ತು. ಈ ಸಂದರ್ಭ ಅದೇ ವಿಮಾನದ ಮತ್ತೊಬ್ಬ ವಿಮಾನ ಚಾಲಕ ಕೋಲ್ಕತಾದ ವಿಮಾನ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪರಿಸ್ಥಿತಿ ವಿವರಿಸಿ ಸಹಾಯ ಯಾಚಿಸಿದ್ದ.

ಒಡನೆಯೇ ಸಹ ಪೈಲಟ್ ಮನವಿಗೆ ಸ್ಪಂದಿಸಿದ ಕೋಲ್ಕತಾದ ವಿಮಾನ ನಿಯಂತ್ರಣ ಕೊಠಡಿಯ ಸಿಬ್ಬಂದಿ ವಿಮಾನವನ್ನು ಹತ್ತಿರದ ನಾಗ್ಪುರದಲ್ಲಿ ಇಳಿಸುವಂತೆ ಸೂಚನೆ ನೀಡಿದ್ದರು. ಅದರಂತೆ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

ಕೊರೊನಾ ಕಾರಣದಿಂದ ಮುಚ್ಚಿದ್ದ ಬಿಮಾನ್ ವಿಮಾನಯಾನ ಸಂಸ್ಥೆ ಇತ್ತೀಚಿಗಷ್ಟೆ ಭಾರತ ಸೇರಿದಂತೆ ಕೆಲ ರಾಷ್ಟ್ರಗಳಿಗೆ ವಿಮಾನ ಹಾರಾಟ ಪುನರಾರಂಭಿಸಿತ್ತು. ವಿಮಾನ ಚಾಲಕನನ್ನು ನಾಗ್ಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆತನ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬೋಯಿಂಗ್ ವಿಮಾನದಲ್ಲಿ ಈ ಸಂದರ್ಭ 126 ಮಂದಿ ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಲಕ ಹೃದಯಾಘಾತಕ್ಕೀಡಾದಾಗ ವಿಮಾನ ಭಾರತದ ಮೇಲೆ ಹಾರುತ್ತಿತ್ತು. ಈ ಸಂದರ್ಭ ಅದೇ ವಿಮಾನದ ಮತ್ತೊಬ್ಬ ವಿಮಾನ ಚಾಲಕ ಕೋಲ್ಕತಾದ ವಿಮಾನ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪರಿಸ್ಥಿತಿ ವಿವರಿಸಿ ಸಹಾಯ ಯಾಚಿಸಿದ್ದ.

ಒಡನೆಯೇ ಸಹ ಪೈಲಟ್ ಮನವಿಗೆ ಸ್ಪಂದಿಸಿದ ಕೋಲ್ಕತಾದ ವಿಮಾನ ನಿಯಂತ್ರಣ ಕೊಠಡಿಯ ಸಿಬ್ಬಂದಿ ವಿಮಾನವನ್ನು ಹತ್ತಿರದ ನಾಗ್ಪುರದಲ್ಲಿ ಇಳಿಸುವಂತೆ ಸೂಚನೆ ನೀಡಿದ್ದರು. ಅದರಂತೆ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

ಕೊರೊನಾ ಕಾರಣದಿಂದ ಮುಚ್ಚಿದ್ದ ಬಿಮಾನ್ ವಿಮಾನಯಾನ ಸಂಸ್ಥೆ ಇತ್ತೀಚಿಗಷ್ಟೆ ಭಾರತ ಸೇರಿದಂತೆ ಕೆಲ ರಾಷ್ಟ್ರಗಳಿಗೆ ವಿಮಾನ ಹಾರಾಟ ಪುನರಾರಂಭಿಸಿತ್ತು. ವಿಮಾನ ಚಾಲಕನನ್ನು ನಾಗ್ಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆತನ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

6 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

8 hours ago