ಇತ್ತೀಚೆಗಷ್ಟೇ ಬಾಲಿವುಡ್ ನಟ ರಜತ್ ಬೇಡಿ ಕಾರು ಪಾದಚಾರಿಗೆ ಡಿಕ್ಕಿಯಾಗಿತ್ತು. ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಪಾದಚಾರಿ ರಾಜೇಶ್ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರಜತ್ ಬೇಡಿ ಮೇಲೆ ಕೇಸ್ ದಾಖಲಾಗಿದ್ದು, ಅವರಿಂದ ಸೂಕ್ತ ನೆರವು ಸಿಕ್ಕಿಲ್ಲ ಎಂದು ಕುಟುಂಬಸ್ತರು ಆರೋಪಿಸಿದ್ದಾರೆ.
40 ವರ್ಷದ ರಾಜೇಶ್ಗೆ ರಜತ್ ಬೇಡಿ ಕಾರು ಡಿಕ್ಕಿಯಾಗಿತ್ತು. ರಜತ್ ರಾಜೇಶ್ನನ್ನು ಕೂಪರ್ ಆಸ್ಪತ್ರೆಗೆ ದಾಖಲಿಸಿದ್ದರು. ತಲೆಗೆ ತೀವ್ರ ಪೆಟ್ಟು ಬಿದ್ದು, ಐಸಿಯುನಲ್ಲಿ ರಾಜೇಶ್ ಚಿಕಿತ್ಸೆ ಪಡೆಯುತ್ತಿದ್ದರು. ನಾನು ನೆರವು ನೀಡುತ್ತೇನೆ, ಚಿಕಿತ್ಸಾ ವೆಚ್ಚ ಭರಿಸುತ್ತೇನೆ ಎಂದು ರಜತ್ ಕುಟುಂಬದವರಿಗೆ ಹೇಳಿ ಆಸ್ಪತ್ರೆಯಿಂದ ಹೋದವರು ಮತ್ತೆ ಆಸ್ಪತ್ರೆ ಕಡೆ ಮುಖ ಮಾಡಿಲ್ಲ.
ಇದೀಗ ರಾಜೇಶ್ ಮಡದಿ, ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ದೂರು ದಾಖಲಿಸಿದರೂ ಪೊಲೀಸರು ರಜತ್ರನ್ನು ಬಂಧಿಸಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆದರೆ ರಾಜೇಶ್ ಮ್ಯಾನೇಜರ್ ಇದನ್ನು ಅಲ್ಲಗಳೆದಿದ್ದಾರೆ. ರಜತ್ ನಿಧಾನವಾಗಿ ಕಾರು ಓಡಿಸುತ್ತಿದ್ದರು. ಆದರೆ ರಾಜೇಶ್ ಗಾಡಿಗೆ ಅಡ್ಡ ಬಂದ. ಆತ ಸಿಕ್ಕಾಪಟ್ಟೆ ಕುಡಿದಿದ್ದ. ರಜತ್ ಅವರೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಮ್ಯಾನೇಜರ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…