News Karnataka Kannada
Tuesday, April 30 2024
ದೇಶ

ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ : ಸಂಸದ ಸಂಜಯ್ ರಾವಾತ್

New Project (14)
Photo Credit :

ಮುಂಬೈ: ಬಿಜೆಪಿಯ ಜನ ಆಶೀರ್ವಾದ ಯಾತ್ರೆ ಕರೋನಾ 3ನೇ ಅಲೆಯನ್ನು ಸ್ವಾಗತಿಸುವ ಕಾರ್ಯಕ್ರಮವಾಗಿದೆ ಎಂದು ಮಹಾರಾಷ್ಟ್ರ ಸಂಸದ ಸಂಜಯ್ ರಾವತ್ ಹೇಳಿದರು .

ಮುಂಬೈಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಸಚಿವರು ವಿವಿಧ ರಾಜ್ಯಗಳಲ್ಲಿ ಆರಂಭಿಸಿರುವ ಜನ ಆಶೀರ್ವಾದ ಯಾತ್ರೆ ಸಂದರ್ಭದಲ್ಲಿ ನೂರಾರು, ಸಾವಿರಾರು ಜನ ಸೇರುತ್ತಾರೆ. ಕೊರೋನಾ ನಿಯಮಗಳನ್ನು ಪಾಲಿಸುತ್ತಿಲ್ಲ, ಇದರಿಂದ ಕೊರೋನಾ ವ್ಯಾಪಕವಾಗಿ ಮುಂದಿನ ದಿನಗಳಲ್ಲಿ ಹರಡುವ ಸಾಧ್ಯತೆ ಹೆಚ್ಚಾಗಿದೆ. ಬಿಜೆಪಿ ಇದನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿರುವ ಮಹಾರಾಷ್ಟ್ರದ ಭಾರ್ತಿ ಪವಾರ್, ಕಪಿಲ್ ಪಾಟೀಲ್ ಮತ್ತು ಭಾಗವತ್ ಕರಡ್ ಜನ ಆಶೀರ್ವಾದ ಯಾತ್ರೆಯನ್ನು ಆರಂಭಿಸಿದ್ದು ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೊರೋನಾ 3ನೇ ಅಲೆ ವ್ಯಾಪಕವಾಗಿ ಹರಡುವ ಸಾಧ್ಯತೆಯಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು